ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿ ಪ್ರೇಕ್ಷಾ

ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿ ಪ್ರೇಕ್ಷಾ


ಬಂಟ್ವಾಳ: ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕ ವತಿಯಿಂದ ನಡೆಯುವ ಬಂಟ್ವಾಳ ತಾಲೂಕು 18ನೇ ಮಕ್ಕಳ ಸಾಹಿತ್ಯ ಸಮ್ಮೇಳನವು ಶಂಭೂರು ದ.ಕ. ಜಿ.ಪ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಿರ್ಮಿಸಲಾಗುವ ರಾಮಚಂದ್ರ ರಾವ್ ಸಭಾಂಗಣದ ವಿ.ಮ. ಭಟ್ ವೇದಿಕೆಯಲ್ಲಿ ನ.19 ರಂದು ನಡೆಯಲಿದ್ದು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆತಿಥೇಯ ಸಂಸ್ಥೆಯಲ್ಲಿ ಏಳನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಪ್ರೇಕ್ಷಾ ಆಯ್ಕೆಯಾಗಿರುತ್ತಾರೆ ಎಂದು ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಹೇಮಚಂದ್ರ ಭಂಡಾರದ ಮನೆ ಮತ್ತು ಪ್ರಧಾನ ಕಾರ್ಯದರ್ಶಿ ಜಯರಾಮ ಡಿ ಪಡ್ರೆ ಜಂಟಿ ಹೇಳಿಕೆ ನೀಡಿದ್ದಾರೆ.

ಪ್ರೇಕ್ಷಾ ಇವರು ಶಂಭೂರು ಗ್ರಾಮದ ಸೀನೆರೆ ಪಾಲು ಮೋಹಿನಿ ಮತ್ತು ಸುಣ್ಣಾಜೆ ದಿನೇಶ್ ಅವರ ದ್ವಿತೀಯ ಪುತ್ರಿ.

ಕಲಿಕೆ ಮತ್ತು ಸಹಪಠ್ಯ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿರುವ ಇವರು ಯಕ್ಷಗಾನದಲ್ಲಿಯೂ ವೇಷ ಮಾಡಿದ ಅನುಭವ ಗಳಿಸಿದ್ದಾರೆ. ಭಕ್ತಿಗೀತೆ ಮತ್ತು  ದೇಶಭಕ್ತಿ ಗೀತೆಗಳ ಗಾಯನ ಇವರ ಮೆಚ್ಚಿನ ಹವ್ಯಾಸ. ಪ್ರತಿಭಾ ಕಾರಂಜಿಯ ಕವನ ವಾಚನ ಸ್ಪರ್ಧೇಯಲ್ಲಿ ಭಾಗವಹಿಸಿ ಕಳೆದೆರಡು ವರ್ಷಗಳಿಂದ ಬಹುಮಾನಿತರಾಗುತ್ತಿದ್ದಾರೆ.

ಇವರು ಶಂಭೂರು ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಕಡೆಶಿವಾಲಯದಲ್ಲಿ ಜರಗಿದ 17ನೇ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಇವರು ಸ್ವರಚಿಸಿದ ಕವನ ‘ಬೆಳೆಸಿ ಉಳಿಸಿ’ ಕವನವು ಆ ವರ್ಷದ ಸ್ಮರಣ ಸಂಚಿಕೆ ‘ಲಹರಿ’ಯಲ್ಲಿ ಪ್ರಕಟವಾಗಿರುವುದು ಹೆಮ್ಮೆಯ ಸಂಗತಿ.

ಮಕ್ಕಳ ಕಲಾ ಲೋಕದ ಅಧ್ಯಕ್ಷ ರಮೇಶ ಎಂ. ಬಾಯಾರು, ಕಾರ್ಯದರ್ಶಿ ಪುಷ್ಪಾ ಎಚ್. ಅವರು ಪ್ರೇಕ್ಷಾ ಇವರನ್ನು ಅಭಿನಂದಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article