
ನ.30 ರಂದು ಕದ್ರಿ ಲಕ್ಷದೀಪ: ಕಲ್ಕೂರ ಪ್ರತಿಷ್ಠಾನದಿಂದ ‘ಭಜನಾ ಸಂಕೀರ್ತನೆ’
Saturday, November 23, 2024
ಮಂಗಳೂರು: ಶ್ರೀಕ್ಷೇತ್ರ ಕದ್ರಿಯಲ್ಲಿ ನ.30 ರಂದು ಲಕ್ಷದೀಪೋತ್ಸವ ಜರಗಲಿದ್ದು, ಇದೇ ಸಂದರ್ಭ ಕಲ್ಕೂರ ಪ್ರತಿಷ್ಠಾನವು ‘ಭಜನಾ ಸಂಕೀರ್ತನೆ’ ಕಾರ್ಯಕ್ರಮ ನಡೆಯಲಿದೆ.
ಸಂಜೆ 5 ಗಂಟೆಗೆ ಆರಂಭಗೊಳ್ಳಲಿರುವ ಈ ಕಾರ್ಯಕ್ರಮದಲ್ಲಿ ಕುಂಜಾರುಗಿರಿ ಗಿರಿಬಳಗ, ಮದ್ಧರಿ ನಾಮ ಸಂಕೀರ್ತನೋಪಾಸನಾ ಸಂಘ, ಬಾಳ-ಕಳವಾರು, ಶ್ರೀ ವಾದಿರಾಜ ತುಳಸಿ ಸಂಕೀರ್ತನಾ ಮಂಡಳಿ ಪಡುಬಿದ್ರಿ, ಶಿವಳ್ಳಿ ಸ್ಪಂದನ ಮಹಿಳಾ ಬಳಗ ಸುರತ್ಕಲ್ ವಲಯ, ಶಿವಳ್ಳಿ ಸ್ಪಂದನ ಕದ್ರಿ, ಅಲೆವೂರು ವಿಷ್ಣುಮೂರ್ತಿ ಬಳಗ ಉಡುಪಿ, ಶಿವಳ್ಳಿ ಸ್ಪಂದನ ಎಕ್ಕೂರು ವಲಯ, ಶಿವಳ್ಳಿ ಸ್ಪಂದನ ಮಹಿಳಾ ಘಟಕ ಕದ್ರಿ ಮತ್ತಿತರ ಭಜನಾ ತಂಡಗಳು ಭಜನಾ ಸಂಕೀರ್ತನೆ ನಡೆಸಲಿವೆ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.