ಪ್ರೇಮಿಯಿಂದ ವಂಚನೆ: ಯುವತಿ ಆತ್ಮಹತ್ಯೆ

ಪ್ರೇಮಿಯಿಂದ ವಂಚನೆ: ಯುವತಿ ಆತ್ಮಹತ್ಯೆ

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ಮನೆಯಲ್ಲಿ ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ನಡೆದಿದೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ತಾಯಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು , ಮಗಳು ಆತ್ಮಹತ್ಯೆ ಮಾಡಿಕೊಳ್ಳಲು ಯುವಕನೊಬ್ಬ ಕಾರಣ ಎಂದು ದೂರಿನಲ್ಲಿ ತಿಳಿಸಿದ್ದಾರೆ. 

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣದ ಬಳಿಕ ಯುವಕ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದು, ಆತನ ಪತ್ತೆಗೆ ಬಲೆ ಬೀಸಿದ್ದಾರೆ.

ಮಿತ್ತಬಾಗಿಲು ಗ್ರಾಮದ ನಿವಾಸಿ 17 ವರ್ಷದ ಅಪ್ರಾಪ್ತ ವಯಸ್ಸಿನ ಪಿಯುಸಿ ವಿದ್ಯಾರ್ಥಿನಿಯನ್ನು ಚಾರ್ಮಾಡಿ ಗ್ರಾಮದ ಪ್ರವೀಣ್ ಗೌಡ ಎಂಬಾತ ಸಾಮಾಜಿಕ ಜಾಲತಾಣದ ಮುಖಾಂತರ ಪರಿಚಯ ಮಾಡಿಕೊಂಡಿದ್ದ. ಬಳಿಕ ಮದುವೆಯಾಗುವುದಾಗಿ ನಂಬಿಸಿದ್ದ. ವಿದ್ಯಾರ್ಥಿನಿಯು ತನ್ನನ್ನು ಪ್ರವೀಣ್ ಜೊತೆ ಮದುವೆ ಮಾಡಿಕೊಡಿ ಎಂದು ತಾಯಿಯೊಂದಿಗೆ ಹೇಳಿದ್ದಳು.

ಯುವಕ ಆಕೆಯ ಜೊತೆ ಸುತ್ತಾಡಿ ಫೋಟೋ ತೆಗೆಸಿಕೊಂಡಿದ್ದ. ಬಳಿಕ ಏಕಾಏಕಿ ನಾನು ನಿನ್ನನ್ನು ಮದುವೆಯಾಗಲ್ಲ. ಸಾಯುವುದಾದರೆ ಸಾಯಿ. ಎಂದು ಹೇಳಿ ಮೋಸ ಮಾಡಿದ್ದಾನೆ ಎಂದು ಆರೋಪಿಸಲಾಗಿದ್ದು, ನೊಂದ ವಿದ್ಯಾರ್ಥಿನಿ ನ.20 ರಂದು ರಾತ್ರಿ ಮನೆಯಲ್ಲಿ ಅಂಗಡಿಯಿಂದ ತಂದಿದ್ದ ಇಲಿಪಾಷಣ ಪೇಸ್ಟ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತರಾಗಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article