
ಮಹಿಳಾ ದೌರ್ಜನ್ಯ: ಕಾನೂನು ಅರಿವು ಕಾರ್ಯಗಾರ
ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಪೊಲೀಸ್ ಇಲಾಖೆ, ರೆಡ್ ಕ್ರಾಸ್ ಸಂಸ್ಥೆ ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ದಕ್ಷಿಣ ಕನ್ನಡ ಜಿಲ್ಲೆ ಇವರ ಸಹಯೋಗದೊಂದಿಗೆ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯದ ಕುರಿತು ಮಾಹಿತಿ ಕಾರ್ಯಗಾರವು ಇತ್ತೀಚಿಗೆ ನಡೆಯಿತು.
ರೆಡ್ ಕ್ರಾಸ್ ಸಂಸ್ಥೆಯ ಸದಸ್ಯ ಜಾನ್ ಉದ್ಘಾಟಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಉರ್ವ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕಿ ಭಾರತಿ ಮಾತನಾಡಿ ಮಹಿಳೆಯರ ಮೇಲೆ ಆಗುತ್ತಿರುವ ಅಪರಾಧಗಳ ಕುರಿತು ಮಾಹಿತಿ ನೀಡುತ್ತಾ ಮಹಿಳೆಯರ ಸುರಕ್ಷತೆಗಿರುವ ವ್ಯವಸ್ಥೆಗಳು ಮತ್ತು ಕಾನೂನುಗಳ ಬಗ್ಗೆ ಹಾಗೂ ಸೈಬರ್ ಕ್ರೈಮ್ ಬಗ್ಗೆ ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಉಸ್ಮಾನ್. ಎ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಕುಮಾರ, ಜಿಲ್ಲಾ ಮಿಷನ್ ಸಂಯೋಜಕ ಅನುಷ್ಯ, ನಿಶಾ, ಕಾವ್ಯ ಉಪಸ್ಥಿತರಿದ್ದರು.
ಸಖಿ ನಿವಾಸ, ಅಂಗನವಾಡಿ, ಸಖಿ ಒನ್ ಸ್ಟಾಪ್ ಸೆಂಟರ್, ವಾತ್ಸಲ್ಯ ಶಿಶು ಪಾಲನಾ ಕೇಂದ್ರ, ರಾಜ್ಯ ಉದ್ಯೋಗಸ್ಥ ಮಹಿಳಾ ವಸತಿ ನಿಲಯ, ಸಾಂತ್ವನ ಕೇಂದ್ರದ ಸಿಬ್ಬಂದಿಗಳು ಭಾಗವಹಿಸಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಶ್ಮಿ ಕೆ.ಎಮ್, ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಜೆಂಡರ್ ಸ್ಪೆಷಲಿಸ್ಟ್ ವಿಶಾಲಾಕ್ಷಿ ವಂದಿಸಿದರು. ಮಾತೃವಂದನ ಯೋಜನೆ ಸಂಯೋಜಕಿ ಅಶ್ವಿನಿ ನಿರೂಪಿಸಿದರು.