ಗೋಣಿಚೀಲದ ಸೂಜಿಯಿಂದ ಪ್ಯಾಂಟ್ ಹೊಲಿದು ಅವಮಾನ: ಯುವಕ ಆತ್ಮಹತ್ಯೆ ಯತ್ನ

ಗೋಣಿಚೀಲದ ಸೂಜಿಯಿಂದ ಪ್ಯಾಂಟ್ ಹೊಲಿದು ಅವಮಾನ: ಯುವಕ ಆತ್ಮಹತ್ಯೆ ಯತ್ನ


ಮಂಗಳೂರು: ಯುವಕನೊಬ್ಬ ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಮಾರುಕಟ್ಟೆಗೆ ಬಂದಾಗ ಮೂರು ಮಂದಿಯ ಗುಂಪು ಆತನನ್ನು ತಡೆದು ನಿಲ್ಲಿಸಿ ಆತನ ಎರಡು ಕೈಗಳನ್ನು ಹಿಂದಕ್ಕೆ ಲಾಕ್ ಮಾಡಿ ಹಿಡಿದು ಪ್ಯಾಂಟ್‌ಗೆ ಗೋಣಿಚೀಲದ ಸೂಜಿಯಿಂದ ಹೊಲಿದು ಅದರ ವಿಡಿಯೋ ಮಾಡಿ ಅದನ್ನು ಸಮಾಜಿಕಜಾಲತಾಣದಲ್ಲಿ ಹಾಕಿದ್ದು. ಬಳಿಕ ಈ ವಿಡಿಯೋ ನೋಡಿದ ಯುವಕ ಮನನೊಂದು ಸಂಜೆ ವೇಳೆಗೆ ಆತ್ಮಹತ್ಯೆಗೆ ಯತ್ನಿಸಿ ಜೀವಣ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿ ಶಬೀರ್ , ಅನೀಶ್ ಪಣಕಜೆ, ಲಾಯಿಲ ಗ್ರಾಮದ ಆದರ್ಶ ನಗರ ನಿವಾಸಿ ಸಲೀಂ ಎಂಬವರು ಸೇರಿ ಈ ಕೃತ್ಯ ನಡೆಸಿದ್ದಾರೆ ಎನ್ನಲಾಗಿದೆ.

ಬೆಳ್ತಂಗಡಿ  ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ (21) ಎಂಬ ಯುವಕ ನವೀನ ಮಾದರಿಯ ಜೀನ್ಸ್ ಪ್ಯಾಂಟ್ ಧರಿಸಿ  ಗುರುವಾರ ಮಧ್ಯಾಹ್ನ ಬೆಳ್ತಂಗಡಿ ನಗರದಲ್ಲಿರುವ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ. ಈ ವೇಳೆ ಮಾರುಕಟ್ಟೆಯಲ್ಲಿದ್ದ ಯುವಕರ ತಂಡವೊಂದು ಆತನನ್ನು ಸಾರ್ವಜನಿಕವಾಗಿ ಎರಡು ಕೈಗಳನ್ನು ಬಲವಂತದಿಂದ ಹಿಡಿದಿಟ್ಟು ಆತನ ಪ್ಯಾಂಟನ್ನು ಗೋಣಿ ಹೊಲಿಯುವ ಸೂಜಿಯಿಂದ ಹೊಲಿದು, ಅದನ್ನು ಮೊಬೈಲ್ ನಲ್ಲಿ ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿ ಹರಿಯಬಿಟ್ಟಿದ್ದಾರೆ.

ವಿಡಿಯೋ ಮೂಲಕ ಟ್ರೋಲ್ ಮಾಡಿದ್ದರಿಂದ ಮಾನಸಿಕವಾಗಿ ನೊಂದ ಶಾಹಿಲ್ ಗುರುವಾರ ಸಂಜೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, 

ಕೂಡಲೇ ಮನೆಯವರು ಆತನನ್ನು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಸೇರಿಸಿದ್ದು ಪ್ರಥಮ ಚಿಕಿತ್ಸೆಯ ನಂತರ ಚಿಂತಾಜನಕ ಸ್ಥಿತಿಯಲ್ಲಿದ್ದ ಯುವಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಸಧ್ಯ ಘಟನೆಯ ವಿಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article