ಕುಖ್ಯಾತ ರೌಡಿಶೀಟರ್ ಬಂಧನ

ಕುಖ್ಯಾತ ರೌಡಿಶೀಟರ್ ಬಂಧನ


ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ (43) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು  ನಡೆಸಿದ ಕಾರ್ಯಾಚರಣೆಯಲ್ಲಿ ಕಳೆದ  ಸಂಜೆ ಬಂಧಿಸಿದೆ.

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್, ಬಂಧಿತ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿಯಾಗಿದ್ದಾನೆ. ಈತ ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಎಸಗಲು ಸಂಚು ರೂಪಿಸುತ್ತಿದ್ದ ವೆಳೆ ಬಂಧಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ನರೇಂದ್ರ ನೇತೃತ್ವದ ಸಿಸಿಬಿ ತಂಡ ದಾವೂದ್ ನನ್ನು ಬಂಧಿಸಲು ಮುಂದಾಗಿದೆ. ಕಾರ್ಯಾಚರಣೆ ವೇಳೆ ದಾವೂದ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಪಿಎಸ್ ಐ ನರೇಂದ್ರ ಮತ್ತು ಇತರ ಸಿಬ್ಬಂದಿಗೆ ಗಾಯಗಳಾಗಿವೆ. ದಾಳಿಯ ಹೊರತಾಗಿಯೂ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ಕ್ರಮಕ್ಕಾಗಿ ದಾವುದ್ನನ್ನು ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಿದೆ.

ದಾವೂದ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ ಐ ನರೇಂದ್ರ ಅವರ ದೂರಿನ ಮೇರೆಗೆ ಆರೋಪಿ ದಾವುದ್ ವಿರುದ್ಧ ಸೆಕ್ಷನ್ 352, 109(1), 121(1), 121(2), 115(2), 132, 3(5), ಮತ್ತು 351(1) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ದಾವೂದ್ ಕೊಲೆ ಸೇರಿದಂತೆ ಹಲವು ಅಪರಾಧಗಳಲ್ಲಿ ಭಾಗಿಯಾಗಿದ್ದಾನೆ. ದಾವೂದ್ ಉಳ್ಳಾಲ, ಮಂಗಳೂರು ದಕ್ಷಿಣ ಮತ್ತು ಬಜ್ಪೆ ಸೇರಿದಂತೆ ಇತರ ಸ್ಥಳಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾನೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article