
ಮಂಗಳೂರು ತಾಲೂಕಿನ ಮುಚ್ಚೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗ್ರಾಹಕ ಶಿಕ್ಷಣ
Saturday, November 23, 2024
ಮೂಡುಬಿದಿರೆ: ಮಂಗಳೂರು ತಾಲೂಕಿನ ಮುಚ್ಚೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗ್ರಾಹಕ ವಿಷಯಕ್ಕೆ ಸಂಬಂಧಿಸಿದ ವಿಚಾರಗಳನ್ನು ದ.ಕ. ಜಿಲ್ಲಾ ಗ್ರಾಹಕ ಸಂಘಟನೆ ಒಕ್ಕೂಟದ ಜೊತೆ ಕಾರ್ಯದರ್ಶಿ, ಸಂಪನ್ಮೂಲ ವ್ಯಕ್ತಿ ರಾಯಿ ರಾಜಕುಮಾರ ಮೂಡುಬಿದಿರೆ ಅವರು ತಿಳಿಸಿಕೊಟ್ಟರು.
ಪ್ರೌಢಶಾಲಾ ಹತ್ತನೇ ತರಗತಿ ಪಾಠದಲ್ಲಿ ಬರುವ ಗ್ರಾಹಕ ಹಕ್ಕು ಮತ್ತು ಕರ್ತವ್ಯಗಳು ಬದುಕಿನಲ್ಲಿ ಎಷ್ಟು ಪ್ರಾಮುಖ್ಯ ಎಂದು ಹಲವಾರು ಉದಾಹರಣೆಗಳ ಮೂಲಕ ಮನವರಿಕೆ ಮಾಡಿಕೊಟ್ಟರು. ಮಾಹಿತಿ ಹಕ್ಕು ಕಾಯ್ದೆಯ ಸದುಪಯೋಗವನ್ನು ಹೇಗೆ ಪಡೆಯಬಹುದಾಗಿದೆ ಎಂದು ವಿವರವಾಗಿ ತಿಳಿಸಿದರು.
ಶಾಲೆಯ ಎಲ್ಲಾ ಅಧ್ಯಾಪಕರು, ಹತ್ತನೇ ತರಗತಿಯ ಎರಡೂ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.