
ವಿವಿ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಶ್ರೀದೇವಿ ಎನ್. ಪ್ರಥಮ
Saturday, November 2, 2024
ಪುತ್ತೂರು: ಶ್ರೀ ಧವಳಾ ಮಹಾವಿದ್ಯಾಲಯ ಮೂಡುಬಿದಿರೆಯಲ್ಲಿ ಇತ್ತೀಚೆಗೆ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಶ್ರೀದೇವಿ ಎನ್. ಅವರು ಪ್ರಥಮ ಬಹುಮಾನವಾಗಿ 1,500 ರೂ. ಪಡೆದುಕೊಂಡಿದ್ದು, ಇವರನ್ನು ಕಾಲೇಜಿನ ಪ್ರಾಂಶುಪಾಲ ರೆ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಅವರು ಅಭಿನಂದಿಸಿದರು. ಈ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಒಟ್ಟು 38 ವಿದ್ಯಾರ್ಥಿಗಳು ಭಾಗವಹಿಸಿದ್ದರು.