
ಏ.24 ರಿಂದ ಮೇ 18 ರ ವರೆಗೆ ಉಳ್ಳಾಲ ಉರೂಸ್
ಉಳ್ಳಾಲ: ಉಳ್ಳಾಲದಲ್ಲಿ ಧಾರ್ಮಿಕ ಶಿಕ್ಷಣ ರಂಗ ಅಭಿವೃದ್ಧಿ ಹೊಂದಲು ತಾಜುಲ್ ಉಲಮಾ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ ಕಾರಣರಾಗಿದ್ದಾರೆ. 2025 ಉರೂಸ್ ನ ದಿನ ನಿಗದಿ ಈಗಾಗಲೇ ಮಾಡಲಾಗಿದೆ. ಏ.24 ರಿಂದ ಮೇ 18 ವರೆಗೆ ಉರೂಸ್ ನಡೆಯಲಿದೆ. ಎಲ್ಲರೂ ಒಗ್ಗಟ್ಟಾಗಿ ಉರೂಸನ್ನು ಯಶಸ್ವಿಯಾಗಿ ನೆರವೇರಿಸಬೇಕೆಂದು ಎಂದು ಉಳ್ಳಾಲ ಖಾಝಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎಪಿ ಅಬೂಬಕ್ಕರ್ ಮುಸ್ಲಿಯಾ ರ್ ಹೇಳಿದರು.
ಅವರು ಉಳ್ಳಾಲ ಉಳ್ಳಾಲ ದರ್ಗಾದಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಖುತುಬುಝ್ಝಮಾನ್ ಅಸ್ಸಯ್ಯದ್ ಮುಹಮ್ಮದ್ ಶರೀಫುಲ್ ಮದನಿ (ಖ.ಸಿ.) ಅವರ ಹೆಸರಿನಲ್ಲಿ 2025 ಎಪ್ರಿಲ್ ತಿಂಗಳಲ್ಲಿ ನಡೆಯುವ 22ನೇ ಪಂಚವಾರ್ಷಿಕ ಹಾಗೂ 432 ನೇ ವಾರ್ಷಿಕ ಉಳ್ಳಾಲ ಉರೂಸ್ ಪ್ರಯುಕ್ತ ಭಾನುವಾರ ನಡೆದ ಉರೂಸ್ ನ ದಿನ ಘೋಷಣೆ ಹಾಗೂ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಈ ಉರೂಸ್ ಕೇವಲ ಮುಸ್ಲಿಮರಿಗೆ ಮಾತ್ರ ಸೀಮಿತವಾಗಿ ನಡೆಯುತ್ತಿಲ್ಲ. ಇಲ್ಲಿ ಜಾತಿ ಧರ್ಮ ಇಲ್ಲ.ಎಲ್ಲಾ ಧರ್ಮದವರಿಗೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ. ಎಲ್ಲರ ಸಹಕಾರ ಅಗತ್ಯ ಇದೆ ಎಂದು ಕರೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿದ ಉಡುಪಿ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಮಾತನಾಡಿ, 2025 ಉರೂಸ್ ಯಶಸ್ವಿ ಆಗಬೇಕು.ಇದಕ್ಕೆ ಎಲ್ಲರ ಸಹಕಾರ ಬೇಕು ಎಂದು ಕರೆ ನೀಡಿದರು.
ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಮಾತನಾಡಿ ಏಪ್ರಿಲ್ ತಿಂಗಳಲ್ಲಿ ಉಳ್ಳಾಲ ಉರೂಸ್ ನಡೆಯಲಿದ್ದು, ದಿನ ಯಾವಾಗ ಬರುತ್ತದೆ ಎಂದು ಭಕ್ತಾದಿಗಳು ಕಾಯುತ್ತಿರುತ್ತಾರೆ.ಈ ಬಾರಿ ಉರೂಸ್ ನಲ್ಲಿ ಹಲವು ವಿಶೇಷ ಕಾರ್ಯಕ್ರಮ ಗಳು ಖಾಝಿ ಸುಲ್ತಾನ್ ಉಲೆಮಾ ಎಪಿ ಉಸ್ತಾದ್ ಅವರ ನೇತೃತ್ವದಲ್ಲಿ ನಡೆಯಲಿದೆ, ಇಲ್ಲಿ ಅಭಿವೃದ್ಧಿ ಕಾಣಲು ಇಲ್ಲಿನ ಮಣ್ಣಿನ ಗುಣ ಕಾರಣ ಎಂದರು.
ದರ್ಗಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಿಹಾಬುದ್ದೀನ್ ಸಖಾಫಿ ಸ್ವಾಗತಿಸಿದರು,ಸಯ್ಯಿದ್ ಅತ್ತಾವುಲ್ಲ ತಂಙಳ್ ದುಆ ನೆರವೇರಿಸಿದರು.ಈ ಸಂದರ್ಭದಲ್ಲಿ ಉರೂಸ್ ನ ಪೋಸ್ಟರ್ ಬಿಡುಗಡೆ ಮಾಡಲಾಯಿತು.
ಉಳ್ಳಾಲ ಜುಮಾ ಮಸೀದಿ ಖತೀಬರಾದ ಇಬ್ರಾಹೀಮ್ ಸಅದಿ, ಅರಬಿಕ್ ಕಾಲೇಜು ಪ್ರಾಂಶುಪಾಲರಾದ ಅಹ್ಮದ್ ಕುಟ್ಟಿ ಸಖಾಫಿ, ದರ್ಗಾ ಮಾಜಿ ಅಧ್ಯಕ್ಷ ಹಾಜಿ ಕಣಚೂರು ಮೋನು, ಬಿ.ಎಂ.ಫಾರೂಕ್, ದರ್ಗಾ ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಜತೆ ಕಾರ್ಯದರ್ಶಿ ಮುಸ್ತಫಾ ಮದನಿನಗರ, ಇಸ್ಹಾಕ್ ಮೇಲಂಗಡಿ, ಕೋಶಾಧಿಕಾರಿ ನಾಝೀಮ್ ಮುಕ್ಕಚ್ಚೇರಿ, ಅರೆಬಿಕ್ ಟ್ರಸ್ಟ್ ಉಪಾಧ್ಯಕ್ಷ ಅಶ್ರಫ್ ಹಾಜಿ, ಪ್ರಧಾನ ಕಾರ್ಯದರ್ಶಿ ಬಶೀರ್ ಸಖಾಫಿ, ಜತೆ ಕಾರ್ಯದರ್ಶಿ ಸಯ್ಯಿದ್ ಜಲಾಲ್ ತಂಗಳ್, ಕೋಶಾಧಿಕಾರಿ ಮುಸ್ತಫ ದಾರಂದಬಾಗಿಲು, ಚಾರಿಟೇಬಲ್ ಟ್ರಸ್ಟ್ ಉಪಾಧ್ಯಕ್ಷ ಫಾರೂಕ್ ಯು.ಎಚ್. ಜಬ್ಬಾರ್ ಮೇಲಂಗಡಿ, ಪ್ರಧಾನ ಕಾರ್ಯದರ್ಶಿ ಇಮ್ತಿಯಾಝ್ ಪಿಲಾರ್, ಜತೆ ಕಾರ್ಯದರ್ಶಿ ಅಬ್ದುಲ್ ಅಝೀಝ್ ಕೋಡಿ, ಕೋಶಾಧಿಕಾರಿ ಫಾರೂಕ್ ಮುಕ್ಕಚ್ಚೇರಿ, ಅಬ್ದುಲ್ ರಶೀದ್ ಝೈನಿ, ಕೆಕೆಎಂ ಕಾಮಿಲ್ ಸಖಾಫಿ, ತೋಕೆ ಮುಹಿಯದ್ದೀನ್ ಕಾಮಿಲ್ ಸಖಾಫಿ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿ, ವಕ್ಫ್ ಜಿಲ್ಲಾ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್, ಎಸ್ ಎಂ ರಶೀದ್ ಹಾಜಿ, ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕ್ಕರ್, ದರ್ಗಾ ಮಾಜಿ ಅಧ್ಯಕ್ಷ ಹಂಝ ಹಾಜಿ, ಹೈದರ್ ಪರ್ತಿಪ್ಪಾಡಿ, ಐಸಮ್ ಶಾಕಿರ್ ಹಾಜಿ ಮತ್ತಿತರರು ಉಪಸ್ಥಿತರಿದ್ದರು.