ಮೊಡಂಕಾಪು ವನದುರ್ಗಾ ಕ್ಷೇತ್ರಕ್ಕೆ ಬಹುಭಾಷಾ ನಟ ಉಪೇಂದ್ರ ಭೇಟಿ

ಮೊಡಂಕಾಪು ವನದುರ್ಗಾ ಕ್ಷೇತ್ರಕ್ಕೆ ಬಹುಭಾಷಾ ನಟ ಉಪೇಂದ್ರ ಭೇಟಿ


ಬಂಟ್ವಾಳ: ಬಹುಭಾಷಾ ಚಲನಚಿತ್ರ ನಟ ಉಪೇಂದ್ರ ಬಂಟ್ವಾಳ ತಾಲೂಕಿನ ಬಿ.ಸಿ. ರೋಡಿಗೆ ಸಮೀಪದ ಮೊಡಂಕಾಪು ಬಳಿಯ ವನದುರ್ಗ ದೇವಸ್ಥಾನಕ್ಕೆ ಮಂಗಳವಾರ ಮಧ್ಯಾಹ್ನ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಸ್ವತಃ ನಿರ್ದೇಶಿಸಿ ನಟಿಸಿರುವ ಹೊಸ ಚಲನಚಿತ್ರ ‘ಯುಐ’ಯ ಯಶಸ್ವಿಗೆ ವನದುರ್ಗಾ ಕ್ಷೇತ್ರದಲ್ಲಿ ದೇವರಿಗೆ ಸರ್ವಾಂಲಂಕಾರ ಸೇವೆ ಸಲ್ಲಿಸಿದರು. ಚಲನಚಿತ್ರ ನಿರ್ಮಾಪಕ ಶ್ರೀಕಾಂತ್, ಸಂಗೀತ ನಿರ್ದೇಶಕ ‘ವೇಲುಹರಿ’ ನವೀನ್ ಮನೋಹರ್ ಅವರ ಜೊತೆಗಿದ್ದರು. ಮೊಡಂಕಾಪು ಕ್ಷೇತ್ರದಲ್ಲಿರುವ ವಿಶೇಷ ಕೆರೆಯ ಬಗ್ಗೆ ರಾಜೇಶ್ ಭಟ್ ಮಾಹಿತಿ ನೀಡಿದರು.

ಮಧ್ಯಾಹ್ನ ಪೂಜೆ ಬಳಿಕ ಕ್ಷೇತ್ರದಲ್ಲಿ ಅನ್ನದಾನ ಪ್ರಸಾದ ಪಡೆದು ಮಂಗಳೂರಿಗೆ ಪ್ರಯಾಣ ಬೆಳೆಸಿದರು. ಇದೇ ಸಂದರ್ಭ ಮೊಡಂಕಾಪು ವನದುರ್ಗ ಕ್ಷೇತ್ರದ ಗುರುದತ್ ಶೆಣೈ, ಪಾಂಡುರಂಗ ಶೆಣೈ ಉಪಸ್ಥಿತರಿದ್ದರು.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article