ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ: 14 ಮಂದಿ ದೋಷಿ

ಕಾಂಗ್ರೆಸ್ ಕಾರ್ಯಕರ್ತರ ಹತ್ಯೆ: 14 ಮಂದಿ ದೋಷಿ

ಕಾಸರಗೋಡು: ಯುವ ಕಾಂಗ್ರೆಸ್ ಕಾರ್ಯಕರ್ತರಾದ ಪೆರಿಯ ಕಳ್ಳಿಯೊಟ್ ಶರತ್ ಲಾಲ್ ಮತ್ತು ಕೃಪೇಶ್ ಹತ್ಯೆ ಪ್ರಕರಣದಲ್ಲಿ 14 ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿದ ಎರ್ನಾಕುಲಂ ಸಿಬಿಐ ಕೋರ್ಟ್, 10 ಮಂದಿಯನ್ನು ಖುಲಾಸೆಗೊಳಿಸಿದೆ.

ಮಾಜಿ ಶಾಸಕ ಕೆ.ವಿ.ಕುಂಞಿರಾಮನ್ ಸೇರಿದಂತೆ 14 ಮಂದಿ ಆರೋಪಿಗಳು. 1 ರಿಂದ 10 ಆರೋಪಿಗಳ ಮೇಲೆ ಕೊಲೆ ಆರೋಪವಿದ್ದು, ಶಿಕ್ಷೆಗೊಳಗಾದ 14 ಮಂದಿಯಲ್ಲಿ ಹತ್ತು ಮಂದಿ ಪ್ರಮುಖ ಸಿಪಿಎಂ ನಾಯಕರು.

ಎ ಪೀತಾಂಬರನ್, ಸಿಪಿಎಂ ಪೆರಿಯ ಸ್ಥಳೀಯ ಸಮಿತಿಯ ಮಾಜಿ ಸದಸ್ಯ, ಸಾಜಿ ಸಿ. ಜಾರ್ಜ್, ಕೆ.ಎಂ. ಸುರೇಶ್, ಕೆ. ಅನಿಲ್ ಕುಮಾರ್, ಜಿಜಿನ್, ಆರ್. ಶ್ರೀರಾಗ್, ಎ. ಅಶ್ವಿನ್ ಮತ್ತು ಸುಬಿಶ್ ಕೊಲೆ ಆರೋಪಿಗಳು. ಒಂಬತ್ತನೇ ಪ್ರತಿವಾದಿ ಎ ಮುರಳಿ, ಟಿ ರಂಜಿತ್, ಕೆ. ಮಣಿಕಂಠನ್ (ಮಾಜಿ ಉದುಮ ಏರಿಯಾ ಕಾರ್ಯದರ್ಶಿ, ಕಾಞಂಗಾಡ್ ಬ್ಲಾಕ್ ಪಂಚಾಯತ್ ಅಧ್ಯಕ್ಷ), ಎ. ಸುರೇಂದ್ರನ್, ಕೆ.ವಿ. ಕುಂಞಿರಾಮನ್ (ಮಾಜಿ ಉದುಮ ಶಾಸಕ, ಸಿಪಿಎಂ ಜಿಲ್ಲಾ ಕಾರ್ಯದರ್ಶಿ), ರಾಘವನ್ ವೆಲ್ತೋಳಿ (ಮಾಜಿ ಪಕ್ಕಂ ಸ್ಥಳೀಯ ಕಾರ್ಯದರ್ಶಿ) ಮತ್ತು ಕೆ.ವಿ.ಭಾಸ್ಕರನ್ ಅವರನ್ನು ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದೆ. 

ಫೆಬ್ರವರಿ 17, 2019 ರಂದು ಕೊಲೆ ನಡೆದಿದ್ದು, ನ್ಯಾಯಾಲಯ 292 ಸಾಕ್ಷಿಗಳ ವಿಚಾರಣೆ ನಡೆಸಿತ್ತು. ಮೊದಲಿಗೆ ಸ್ಥಳೀಯ ಪೊಲೀಸರ ವಿಶೇಷ ತಂಡ ಹಾಗೂ ನಂತರ ಅಪರಾಧ ವಿಭಾಗದ ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದರು. 

ಶರತ್ ಲಾಲ್ ಮತ್ತು ಕೃಪೇಶ್ ಅವರ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ ಹಿನ್ನೆಲೆಯಲ್ಲಿ ಸಿಬಿಐ ತನಿಖೆಯನ್ನು ಕೈಗೆತ್ತಿಕೊಂಡಿತ್ತು. ತಿರುವನಂತಪುರ ಘಟಕದ ಡಿವೈಎಸ್ಪಿ ಅನಂತಕೃಷ್ಣನ್ ನೇತೃತ್ವದ ಸಿಬಿಐ ತಂಡ ತನಿಖೆ ನಡೆಸಿತ್ತು. ಫೆಬ್ರವರಿ 2023 ರಲ್ಲಿ ಸಿಬಿಐ ನ್ಯಾಯಾಲಯದಲ್ಲಿ ವಿಚಾರಣೆ ಆರಂಭಗೊಂಡಿತ್ತು

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article