ಅಂಬರ್‌ಗ್ರೀಸ್ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ

ಅಂಬರ್‌ಗ್ರೀಸ್ ಮಾರಾಟ ಜಾಲ: ಅಧಿಕಾರಿಗಳಿಗೆ ಹಲ್ಲೆಗೈದ ನಾಲ್ವರ ಬಂಧನ

ಕುಂದಾಪುರ: ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟ ಜಾಲದ ಶಂಕೆಯ ಹಿನ್ನೆಲೆಯಲ್ಲಿ ಕೋಡಿ ಸಮೀಪದ ಎಂಕೋಡಿಯ ಸೌಹಾರ್ದ ಭವನದಲ್ಲಿ ಕಾರ್ಯಾಚರಣೆ ನಡೆಸಿದ್ದ ಅರಣ್ಯ ಸಂಚಾರಿ ದಳದ (ಫಾರೆಸ್ಟ್ ಸಿಐಡಿ) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ಪೈಕಿ ನಾಲ್ವರನ್ನು ಕುಂದಾಪುರ ಪೊಲೀಸರನ್ನು ಬಂಧಿಸಿದ್ದಾರೆ.

ಆರೋಪಿಗಳಾದ ಕೋಡಿಯ ನಿವಾಸಿಗಳಾದ ಅಬೂಬಕ್ಕರ್ (50), ಹಸೈನಾರ್ (57), ಉಬೈದುಲ್ಲಾ (40) ಹಾಗೂ ಬೈಂದೂರಿನ ಮಹಮ್ಮದ್ ಅಲಿ (50) ಬಂಧಿತರು. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಡಿ.18ರ ಮಧ್ಯಾಹ್ನ ಅರಣ್ಯ ಸಂಚಾರಿ ದಳದ  ಮಂಗಳೂರಿನ ಎಸ್‌ಐ ಜಾನಕಿ ನೇತೃತ್ವದ ತಂಡವು ಅಂಬರ್ ಗ್ರೀಸ್ ಮಾರಾಟ ಶಂಕೆಯ ಹಿನ್ನೆಲೆಯಲ್ಲಿ ದಾಳಿ ನಡೆಸಿತ್ತು. ಈ ವೇಳೆ ಅಲ್ಲಿದ್ದ ಕೆಲವರು ಅಧಿಕಾರಿಗಳನ್ನೇ ಕಟ್ಟಿಹಾಕಿ, ಹಲ್ಲೆ ನಡೆಸಿದ್ದರಿಂದ ಕೆಲವು ಗಾಯಗೊಂಡಿದ್ದರು. ಈ ಪ್ರಕರಣ ಸಂಬಂಧ ಎಸ್‌ಐ ಜಾನಕಿ ಅವರು ನೀಡಿದ ದೂರಿನಂತೆ ಜಯಕರ, ರತ್ನಾಕರ, ಅಬೂಬಕ್ಕರ್, ಆಸೀಫ್, ಇತರ ಮೂವರ ವಿರುದ್ಧ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article