ಕಸ್ಟಡಿ ಅರ್ಜಿ ತಿರಸ್ಕಾರ

ಕಸ್ಟಡಿ ಅರ್ಜಿ ತಿರಸ್ಕಾರ

ಮಂಗಳೂರು: ಧಾರ್ಮಿಕ ಮುಂದಾಳು, ಉದ್ಯಮಿ ಬಿ.ಎಂ.ಮುಮ್ತಾಝ್ ಅಲಿ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಮೂವರು ಆರೋಪಿಗಳ ಪೊಲೀಸ್ ಕಸ್ಟಡಿಯ ಅರ್ಜಿಯನ್ನು ಮೂರನೇ ಜೆಎಂಎಫ್ ಸಿ ನ್ಯಾಯಾಲಯ ತಿರಸ್ಕರಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರಹ್ಮತ್ ಪತಿ ಶುಐಬ್, ನಂದಾವರ ನಿವಾಸಿ ಶಾಫಿ, ಕೃಷ್ಣಾಪುರ ನಿವಾಸಿ ಮುಸ್ತಫಾ ಎಂಬವರನ್ನು ವಿಚಾರಣೆ ನಡೆಸಲಿದ್ದು, ಪೊಲೀಸ್ ಕಸ್ಟಡಿಗೆ ನೀಡುವಂತೆ ಸುರತ್ಕಲ್ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆಗೆ ಎತ್ತಿಕೊಂಡ ಮಂಗಳೂರು 3ನೇ ಜೆಎಂಎಫ್ ಸಿ ನ್ಯಾಯಾಲಯವು, ಆರೋಪಿಗಳ ವಿಚಾರಣೆಗಾಗಿ ಈಗಾಗಲೇ ಬೇಕಾದಷ್ಟು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಅವಕಾಶ ನೀಡಲಾಗಿತ್ತು. ಇನ್ನು ನೀಡಲಾಗದು. ಕಾನೂನಿನಲ್ಲಿ ಅದಕ್ಕೆ ಅವಕಾಶವಿಲ್ಲ ಎಂದು ಅಭಿಪ್ರಾಯಿಸಿತು. ಅಲ್ಲದೆ, ಸುರತ್ಕಲ್ ಪೊಲೀಸರು ಸಲ್ಲಿಸಿದ್ದ ಕಸ್ಟಡಿ ಅರ್ಜಿಯನ್ನು ತಿರಸ್ಕರಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article