ಸೂಕ್ಷ್ಮಾಣು ಜೀವಶಾಸ್ತ್ರ ಸಮಾಜಕ್ಕೆ ರಾಜ್ಯ ಸಂಯೋಜಕರಾಗಿ ಆಯ್ಕೆ

ಸೂಕ್ಷ್ಮಾಣು ಜೀವಶಾಸ್ತ್ರ ಸಮಾಜಕ್ಕೆ ರಾಜ್ಯ ಸಂಯೋಜಕರಾಗಿ ಆಯ್ಕೆ


ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸಿದ್ಧರಾಜು ಎಂ. ಎನ್. ಅವರು ರಾಜ್ಯದ ಸೂಕ್ಷ್ಮಾಣು ಜೀವಶಾಸ್ತ್ರ ಸಮಾಜದ ರಾಜ್ಯ ಸಂಯೋಜಕರಾಗಿ ಆಯ್ಕೆಯಾಗಿದ್ದಾರೆ.

ಈ ಹಿಂದೆ ಅವರು ಅಮೆರಿಕಾದ ಮೇರಿಲ್ಯಾಂಡ್ ವಿಶ್ವವಿದ್ಯಾನಿಲಯದಲ್ಲಿ ಪೋಸ್ಟ್ ಡಾಕ್ಟರೇಟ್ ಅಧ್ಯಯನ ಮಾಡುವ ಸಂದರ್ಭದಲ್ಲಿ ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗದಲ್ಲಿ ನಡೆಸಿದ ಉನ್ನತ ಮಟ್ಟದ ಸಂಶೋಧನಾ ಚಟುವಟಿಕೆಗಳನ್ನು ಪರಿಗಣಿಸಿ ಈ ಹುದ್ದೆಗೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article