ಸಂಘನಿಕೇತನಕ್ಕೆ ಮೋಹನ್ ಭಾಗವತ್ ಭೇಟಿ
Sunday, December 8, 2024
ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಮಂಗಳೂರಿನ ಸಂಘನಿಕೇತನದ ಬಳಿ ನಿರ್ಮಿಸಲಾದ ನೂತನ ಸಂಘ ಕಾರ್ಯಾಲಯಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಕಾರ್ಯಾಲಯದ ಆವರಣದಲ್ಲಿ ಸ್ವರ್ಣಚಂಪಕ ಗಿಡವೊಂದನ್ನು ನೆಟ್ಟರು.
ಸಹಸರಕಾರ್ಯವಾಹ ಮುಕುಂದ ಸಿ.ಆರ್, ಕ್ಷೇತ್ರೀಯ ಸಂಘಚಾಲಕ ಡಾ. ಪಿ. ವಾಮನ್ ಶೆಣೈ, ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ, ಪ್ರಾಂತ ಸಂಘಚಾಲಕ ಜಿ.ಎಸ್. ಉಮಾಪತಿ, ಮಂಗಳೂರು ವಿಭಾಗ ಸಂಘಚಾಲಕ ಡಾ. ನಾರಾಯಣ ಶೆಣೈ ಉಪಸ್ಥಿತರಿದ್ದರು.