ಶ್ರೀ ಕ್ಷೇತ್ರ ಧಮ೯ಸ್ಥಳದಿಂದ ಲಾಡಿ ನಾಗಬ್ರಹ್ಮ ದೇವಸ್ಥಾನಕ್ಕೆ 10 ಲಕ್ಷ ರೂ. ದೇಣಿಗೆ ಹಸ್ತಾಂತರ
Saturday, December 21, 2024
ಮೂಡುಬಿದಿರೆ: ಜೀರ್ಣೋದ್ಧಾರದ ಹಂತದಲ್ಲಿರುವ ಲಾಡಿ ಚತುರ್ಮುಖ ನಾಗಬ್ರಹ್ಮ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 10 ಲಕ್ಷ ರೂ.ನ ಚೆಕ್ಕನ್ನು ಯೋಜನೆಯ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ ಅವರು ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಅನಂತಕೃಷ್ಣ ಭಟ್ ಅವರಿಗೆ ಶುಕ್ರವಾರ ಹಸ್ತಾಂತರಿಸಿದರು.
ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸುನೀತಾ ನಾಯ್ಕ್, ಮೇಲ್ವೀಚಾರಕಿ ಮಮತಾ, ಸೇವಾಪ್ರತಿನಿಧಿ ಅನಿತಾ ಬಲ್ಲಾಳ್, ಜನಜಾಗೃತಿ ಸದಸ್ಯರು. ಒಕ್ಕೂಟ ಅಧ್ಯಕ್ಷರು ಸಂಘದ ಸದಸ್ಯರು, ಕಮಿಟಿಯ ಪದಾಧಿಕಾರಿಗಳು, ದೇವಸ್ಥಾನದ ಅರ್ಚಕರು ಉಪಸ್ಥಿತರಿದ್ದರು.