ಕರಾಟೆ: ಎಕ್ಸಲೆಂಟ್‌ನ ಶ್ರೇಯಸ್ ಸಿ. ಲಿಂಗರಾಜು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕರಾಟೆ: ಎಕ್ಸಲೆಂಟ್‌ನ ಶ್ರೇಯಸ್ ಸಿ. ಲಿಂಗರಾಜು ರಾಷ್ಟ್ರಮಟ್ಟಕ್ಕೆ ಆಯ್ಕೆ


ಮೂಡುಬಿದಿರೆ: ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ 45 ಕೆಜಿ ವಿಭಾಗದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ, ಮೈಸೂರಿನ ಲಿಂಗರಾಜು ಮತ್ತು ಲತಾ ದಂಪತಿಯ ಪುತ್ರ ಶ್ರೇಯಸ್ ಸಿ. ಲಿಂಗರಾಜು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ್ಕೆ ಭಾಜನರಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 

ವಿದ್ಯಾರ್ಥಿಯ ಈ ಅದ್ಭುತ ಸಾಧನೆಗೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್ ಮತ್ತು ಬೋಧಕ ಬೋಧಕೇತರ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article