
ಸಸ ಚೆಲ್ಯಡ್ಕ ಸೇತುವೆ ನಿರ್ಮಾಣದ ಹಿನ್ನಲೆ ಇಲಾಖೆಯಿಂದ ಬದಲಿ ಮಾರ್ಗ ಸೂಚಿ
Friday, December 6, 2024
ಪುತ್ತೂರು: ದೇವಸ್ಯ-ಪಾಣಾಜೆ ರಸ್ತೆಯ ಬೆಟ್ಟಂಪಾಡಿ ಗ್ರಾಮದ ಚೆಲ್ಯಡ್ಕದಲ್ಲಿ ಶಿಥಿಲಾವಸ್ಥೆಯಲ್ಲಿರುವ ಚೆಲ್ಯಡ್ಕ ಮುಳುಗು ಸೇತುವೆಯನ್ನು ಕೆಡವಿ ಹೊಸ ಸೇತುವೆ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಬೇಕಾಗಿರುವುದರಿಂದ ಆರ್ಯಾಪು ಗ್ರಾಮದ ಒಳತ್ತಡ್ಕ-ದೇವಸ್ಯದಿಂದ ಬೆಟ್ಟಂಪಾಡಿ-ಪಾಣಾಜೆ ಕಡೆಗೆ ಹೋಗುವ ವಾಹನಗಳ ಸಂಚಾರವನ್ನು ಡಿ.9ರಿಂದ ಮುಂದಿನ ಮೇ.6ರ ತನಕ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುವುದು. ಈ ಅವಧಿಯಲ್ಲಿ ಬದಲಿ ರಸ್ತೆಯನ್ನು ಬಳಸಿಕೊಂಡು ಸಾರ್ವಜನಿಕರು ಸಹಕರಿಸಬೇಕೆಂದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಅವಧಿಯಲ್ಲಿ ವಾಹನ ಸವಾರರು ದೇವಸ್ಯ-ಬೈರೋಡಿ-ಕಾಫಿಕಾಡು-ಕೈಕಾರ ರಸ್ತೆಯಲ್ಲಿ ಸಂಚರಿಸುವ ಮೂಲಕ ಹೊಸ ಸೇತುವೆ ನಿರ್ಮಾಣ ಕಾರ್ಯ ನಿರ್ವಹಿಸಲು ಅನುವು ಮಾಡಿಕೊಡಬೇಕು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.