ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರವಾಲ್ ವರ್ಗಾವಣೆ ಒತ್ತಾಯಿಸಿ ಉಡುಪಿಯಲ್ಲಿ ಸಿಪಿಐಎಂ ಪಕ್ಷ ಮತ್ತು ಸಮಾನಮನಸ್ಕ ಸಂಘಟನೆಗಳಿಂದ ಪ್ರತಿಭಟನೆ

ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರವಾಲ್ ವರ್ಗಾವಣೆ ಒತ್ತಾಯಿಸಿ ಉಡುಪಿಯಲ್ಲಿ ಸಿಪಿಐಎಂ ಪಕ್ಷ ಮತ್ತು ಸಮಾನಮನಸ್ಕ ಸಂಘಟನೆಗಳಿಂದ ಪ್ರತಿಭಟನೆ


ಉಡುಪಿ: ಪ್ರತಿಭಟನೆ ಧರಣಿಗಳಿಗೆ ಅನುಮತಿ ನಿರಾಕರಣೆ ಮಾಡುವುದು, ಸಿಪಿಐಎಂ 16 ಜನ ಮುಖಂಡರ ಮೇಲೆ ಹಾಗೂ ಜನಪರ ಸಂಘಟನೆಯ ಮುಖಂಡರ ಮೇಲೆ ಮೊಕದ್ದಮೆ ಹೂಡುವುದು, ಸಂವಿಧಾನದ ಹಕ್ಕುಗಳನ್ನು ಧಮನಿಸಲು ಹೊರಟ, ಬಿ.ಜೆ.ಪಿ. ಸಂಘಪರಿವಾರದ ಬೆಂಗಾವಲಾಗಿ ನಿಂತ್ತಿರುವ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರವಾಲ್ ವರ್ಗಾವಣೆ ಒತ್ತಾಯಿಸಿ ಉಡುಪಿಯ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪ್ರತಿಭಟನೆ ನಡೆಸಿ ಸರಕಾರಕ್ಕೆ ಒತ್ತಾಯಿಸಿಸಲಾಯಿತು.

ಮುಖ್ಯಮಂತ್ರಿ ಹಾಗೂ ಗ್ರಹ ಸಚಿವರು ಕೂಡಲೆ ಸಿಪಿಐಎಂ ಮುಖಂಡರ ಮೇಲೆ ಹಾಕಿರುವ ಕೇಸನ್ನು ವಾಪಾಸು ಪಡೆಯಬೇಕು, ಅಕ್ರಮ ಮರಳುಗಾರಿಕೆ, ಬೆಟ್ಟಿಂಗ್, ಮಸಾಜ್ ಪಾರ್ಲರ್ ದಂಧೆಕೋರರನ್ನು ಬಂಧುಗಳಂತೆ ನೋಡುವ ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರವಾಲ್ ಕೂಡಲೇ ತನಿಖೆಗೆ ಒಳಪಡಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ತೀವ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಲಾಯಿತು.

ಪ್ರತಿಭಟನೆಯಲ್ಲಿ ಸಿಪಿಐಎಂ ಉಡುಪಿ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಉಡುಪಿ ವಲಯ ಕಾರ್ಯದರ್ಶಿ ಶಶಿಧರ ಗೋಲ್ಲ, ಜಿಲ್ಲಾ ಸಮಿತಿ ಸದಸ್ಯರಾದ ಕವಿರಾಜ್ ಎಸ್. ಕಾಂಚನ್, ವೆಂಕಟೇಶ್ ಕೋಣಿ, ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಸಂಚಾಲಕರಾದ ಸಂಜೀವ ಬಳ್ಕೂರ್, ಡಿ.ಎಸ್.ಎಸ್. ಸಂಘಟನೆಯ ರಾಜ್ಯ ಸಂಚಾಲಕ ಸುಂದರ್ ಮಾಸ್ತರ್, ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಮುಖಂಡರಾದ ಇದ್ರೀಸ್ ಹೂಡೆ, ಅಜೀಜ್ ಉದ್ಯಾವರ, ನಾಸೀರ್ ಕಾಪು, ಸಮಾನ ಮನಸ್ಕ ಸಂಘಟನೆ ಮುಖಂಡರಾದ ಕೃಷ್ಣ, ಸಂವರ್ಥ ಸಾಹಿಲ್, ದಯಾನಂದ ಕೋಟ್ಯಾನ್, ಸಿಪಿಐಎಂ ಮುಖಂಡರಾದ ನಳಿನಿ ಎಸ್., ಸೈಯಾದ್ ಅಲಿ, ರಮೇಶ್ ಉಡುಪಿ, ಮೋಹನ್, ಸದಾಶಿವ ಪೂಜಾರಿ, ಮುರಳಿ, ರಮೇಶ್ ಶೇರಿಗಾರ ಉಪಸ್ಥಿತರಿದ್ದರು.




Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article