ಮಸೀದಿಗೆ ನುಗ್ಗಿ ಧರ್ಮಗುರುವಿನ ಮೇಲೆ ತಂಡದಿಂದ ಹಲ್ಲೆ
Thursday, December 19, 2024
ಉಜಿರೆ: ಕ್ಷುಲ್ಲಕ ವಿಚಾರದಲ್ಲಿ ಚಾರ್ಮಾಡಿಯ ಮೊಹಿದ್ದಿನ್ ಜುಮ್ಮಾ ಮಸೀದಿಯ ಧರ್ಮಗುರುವಿನ ಮೇಲೆ ಸುಮಾರು 12 ಜನರ ತಂಡ ಮಂಗಳವಾರ ರಾತ್ರಿ ಮಸೀದಿಗೆ ನುಗ್ಗಿ ಹಲ್ಲೆ ಮಾಡಿದ್ದು, ಗಾಯಗೊಂಡ ಧರ್ಮಗುರು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಾರ್ಮಾಡಿ ಗ್ರಾಮದ ಮೊ ಹಿದ್ದಿನ್ ಜುಮ್ಮಾ ಮಸೀದಿ ಜಾಲಲಿನಗರದ ಧರ್ಮಗುರು ಶಮೀರ್ ಮುಸ್ಲಿಯಾರ್ (37) ಎಂಬವರಿಗೆ ಸ್ಥಳೀಯರಾದ ಬದ್ರುದ್ದಿನ್, ಸಂಶುದ್ದಿನ್, ಅಹಮದ್ ಟಿಬಿ ರೋಡ್, ನೌಫಲ್, ಅನ್ಸರ್, ಮುನೀರ್ ಅಸೀಫ್, ಅಫೀಝ್, ಅಫ್ರೀಜ್, ಶರೀಫ್, ಅಬ್ದುಲ್ ಖಾದರ್ ಮತ್ತಿತರರು ರಾತ್ರಿ ವೇಳೆ ಮಸೀದಿಗೆ ನುಗ್ಗಿ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.
ಮಸೀದಿ ಆವರಣದಲ್ಲಿ ಹಲ್ಲೆ ಮಾಡಿದ ತಂಡದವರು ಮತ್ತು ಮಸೀದಿಯವರ ಜತೆ ಘರ್ಷಣೆ ನಡೆದಿದ್ದು, ಈ ಘಟನೆಯ ಬಗ್ಗೆ ವಿಡಿಯೋ ವೈರಲ್ ಅಗಿದೆ. ಈ ಘಟನೆ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಧರ್ಮಗುರು ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.