ಗ್ಯಾಸ್ ಸೋರಿಕೆ ಸ್ಥಳಕ್ಕೆ ಸ್ಪೀಕರ್ ಯು.ಟಿ. ಖಾದರ್ ಭೇಟಿ

ಗ್ಯಾಸ್ ಸೋರಿಕೆ ಸ್ಥಳಕ್ಕೆ ಸ್ಪೀಕರ್ ಯು.ಟಿ. ಖಾದರ್ ಭೇಟಿ


ಉಳ್ಳಾಲ: ಗ್ಯಾಸ್ ಸೋರಿಕೆಯಿಂದ ಚಿಕಿತ್ಸೆ ಫಲಿಸದೇ ಇಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿ ಘಟನಾ ಸ್ಥಳಕ್ಕೆ ಶನಿವಾರ ಸ್ಪೀಕರ್ ಯು.ಟಿ. ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. 

ಗ್ಯಾಸ್ ಸೋರಿಕೆಯಿಂದ ಈ ಘಟನೆ ನಡೆದಿರುವ ಹಿನ್ನೆಲೆಯಲ್ಲಿ ಪರಿಹಾರಕ್ಕೆ ಸಂಬಂಧಿಸಿ ಶಿಷ್ಟಾಚಾರ ಪ್ರಕಾರ ದಾಖಲೆ ಸಹಿತ ವರದಿ ನೀಡಬೇಕು ಎಂದು ಎಚ್‌ಪಿ ಗ್ಯಾಸ್‌ನ ವಲಯ ಮಾರುಕಟ್ಟೆ ಸಿಬ್ಬಂದಿ ರಾಹುಲ್‌ಗೆ ಸೂಚನೆ ನೀಡಿದರು. ಆಯಾ ಇಲಾಖಾಧಿಕಾರಿಗಳು ಆಯಾ ಇಲಾಖೆಗೆ ಸಂಬಂಧಿಸಿದ ವರದಿ ಶೀಘ್ರ ನೀಡಬೇಕು ಎಂದು ಈ ಸಂದರ್ಭದಲ್ಲಿ ಆಯಾ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲ್ಕಟ್ಟ ಸಮೀಪದ ಖಂಡಿಕ ಎಂಬಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆ ಅನಾಹುತದಿಂದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು ಆಗಿದ್ದ ನಾಲ್ವರ ಪೈಕಿ ಇಬ್ಬರು ಮೃತಪಟ್ಟಿದ್ದಾರೆ. ಉಳಿದಿಬ್ಬರ ಚಿಕಿತ್ಸೆಗೆ ಪುರ್ಣ ವ್ಯವಸ್ಥೆ ಮಾಡಲಾಗಿದೆ. ಚಿಕಿತ್ಸೆಯಲ್ಲಿದ್ದ ಇಬ್ಬರ ಪೈಕಿ ಒಬ್ಬರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಒಬ್ಬಳು ಬಾಲಕಿಯ ಸ್ಥಿತಿ ಗಂಭೀರತೆಯಿಂದ ಇದ್ದು, ಚಿಕಿತ್ಸೆ ಮುಂದುವರಿದಿದೆ. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು ಆಗಿದ್ದವರಿಗೆ ಚಿಕಿತ್ಸಾ ವ್ಯವಸ್ಥೆ, ಚರ್ಮದ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದು ಹೇಳಿದರು.

ಪರಿಹಾರ ಘೋಷಣೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಪರಿಹಾರ ಒಂದು ಗಂಟೆಯಲ್ಲಿ ನೀಡಬಹುದು.ಅದಕ್ಕೆ ಕಷ್ಟವಿಲ್ಲ. ಇಲ್ಲಿ ಪರಿಹಾರಕ್ಕಿಂತ ಚಿಕಿತ್ಸೆ ಮುಖ್ಯವಾಗಿದೆ. ಚಿಕಿತ್ಸೆಗೆ ವೈದ್ಯರ ಸಹಿತ ವ್ಯವಸ್ಥೆ ಮಾಡಲಾಗಿದೆ. ಮೊದಲು ಆಸ್ಪತ್ರೆಯಲ್ಲಿ ಇರುವವರು ಬದುಕಿ ಬರಬೇಕು. ಹುಬ್ಬಳ್ಳಿಯಲ್ಲಿ ನಡೆದ ಘಟನೆಯಲ್ಲಿ ತೊಂದರೆ ಗೊಳಗಾದದ್ದು ಒಂದೇ ಕುಟುಂಬದವರಲ್ಲ. ಆದ ಕಾರಣ ಪರಿಹಾರ ನೀಡಿದ್ದೇವೆ. ಈ ಹಿಂದೆ ಮದನಿನಗರ, ಹರೇಕಳದಲ್ಲಿ ದುರಂತ ಸಂಭವಿಸಿದಾಗ ಅದೇ ದಿನ ಪರಿಹಾರ ನೀಡಿದ್ದೇವೆ ಎಂದು ಹೇಳಿದರು.

ಸಹಾಯಕ ಆಯುಕ್ತ ಹರ್ಷವರ್ಧನ್, ತಹಶೀಲ್ದಾರ್ ಪುಟ್ಟ ರಾಜು, ಕಂದಾಯ ಅಧಿಕಾರಿ ಪ್ರಮೋದ್, ಎಚ್‌ಪಿ ಗ್ಯಾಸ್ ವಲಯ ಮಾರುಕಟ್ಟೆ ಸಿಬ್ಬಂದಿ ರಾಹುಲ್, ಎಸಿಪಿ ಧನ್ಯ, ಕೊಣಾಜೆ ಇನ್‌ಸ್ಪೆಕ್ಟರ್ ರಾಜೇಂದ್ರ, ಸಬ್ ಇನ್‌ಸ್ಪೆಕ್ಟರ್ ನಾಗರಾಜ್, ಅಗ್ನಿ ಶಾಮಕ ದಳದ ಸಿಬ್ಬಂದಿ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article