ಲಂಚ ಸ್ವೀಕಾರ: ಇಬ್ಬರು ಲೋಕಾಯುಕ್ತ ಬಲೆಗೆ

ಲಂಚ ಸ್ವೀಕಾರ: ಇಬ್ಬರು ಲೋಕಾಯುಕ್ತ ಬಲೆಗೆ


ಗಂಗೊಳ್ಳಿ: ಜಾಗದ ದಾಖಲೆಗೆ ಲಂಚ ಕೇಳಿದ ಆಪಾದನೆ ಮೇಲೆ ಇಲ್ಲಿನ ಪಿಡಿಒ ಹಾಗೂ ಕ್ಲರ್ಕ್‌ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಮಹಮ್ಮದ್ ಹನೀಫ್ ಅವರ ದೂರಿನ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಹನೀಫ್ ಅವರ ಜಾಗದ 9/11 ಮಾಡಿ ಕೊಡಲು 22,000 ರೂ. ಲಂಚಕ್ಕೆ ಬೇಡಿಕೆ ಇಟ್ಟ ಗಂಗೊಳ್ಳಿ ಪಿಡಿಒ ಉಮಾಶಂಕರ್ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಶೇಖರ ಬಿ. ಅವರನ್ನು ರೆಡ್ ಹ್ಯಾಂಡ್ ಆಗಿ ಬಂಧಿಸಲಾಗಿದೆ.

ಲೋಕಾಯುಕ್ತ ಅಧೀಕ್ಷಕ ನಟರಾಜ್ ಅವರ ಮಾರ್ಗದರ್ಶನದಲ್ಲಿ ಪ್ರಭಾರ ಪೊಲೀಸ್ ಉಪಾಧೀಕ್ಷಕ ಮಂಜುನಾಥ್ ಅವರ ನೇತೃತ್ವದಲ್ಲಿ ಇನ್ಸ್ ಪೆಕ್ಟರ್ ಅಮನುಲ್ಲ ಹಾಗೂ ಚಂದ್ರಶೇಖರ, ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರೋಹಿತ್,  ಪುಷ್ಪಳತಾ, ಮಲ್ಲಿಕಾ, ಅಬ್ದುಲ್ ಜಲಾಲ್ , ಸತೀಶ್ ಹಂದಾಡಿ, ರವೀಂದ್ರ ಗಾಣಿಗ, ಪ್ರಸನ್ನ ದೇವಾಡಿಗ, ರಮೇಶ್, ಸತೀಶ್ ಆಚಾರ್ಯ, ರಾಘವೇಂದ್ರ ಹೊಸಕೋಟೆ, ಸೂರಜ್ ಕಾಪು, ಸುಧೀರ್ ಹಾಗೂ ಮಂಗಳೂರು ಲೋಕಾಯುಕ್ತ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಮಹಮ್ಮದ್ ಹನೀಪ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.




Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article