
ಅಂತಾರಾಷ್ಟ್ರೀಯ ಪುಸ್ತಕೋತ್ಸವದ ಮೂರನೇ ಆವೃತ್ತಿಯ ಉದ್ಘಾಟನಾ ಸಮಾರಂಭದಲ್ಲಿ ಯು.ಟಿ. ಖಾದರ್ ಭಾಗಿ
Tuesday, January 7, 2025
ಕೇರಳ: ಕೇರಳ ವಿಧಾನ ಸಭೆ ಹಮ್ಮಿಕೊಂಡ ಅಂತಾರಾಷ್ಟ್ರೀಯ ಪುಸ್ತಕೋತ್ಸವದ ಮೂರನೇ ಆವೃತ್ತಿಯ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ವಿಧಾಸಭೆಯ ಅಧ್ಯಕ್ಷ ಯು.ಟಿ. ಖಾದರ್ ಅವರು ಭಾಗವಹಿಸಿ ಶುಭ ಹಾರೈಸಿ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲೂ ಕೂಡಾ ಪುಸ್ತಕೋತ್ಸವ ನಡೆಸುವ ಚಿಂತನೆ ನಡೆಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇರಳ ವಿಧಾನಸಭಾಧ್ಯಕ್ಷ ಸಂಶೀರ್ ಹಾಗೂ ಕೇರಳ ವಿಪಕ್ಷ ನಾಯಕ ವಿ.ಡಿ. ಸತೀಶನ್ ಮತ್ತಿತರು ಉಪಸ್ಥಿತರಿದ್ದರು.