ಕೋಟ ಮಣೂರಿನಲ್ಲಿ ಹೆಜ್ಜೇನು ದಾಳಿ: ಇಬ್ಬರು ಮಹಿಳೆಯರು ಸೇರಿ 8 ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು

ಕೋಟ ಮಣೂರಿನಲ್ಲಿ ಹೆಜ್ಜೇನು ದಾಳಿ: ಇಬ್ಬರು ಮಹಿಳೆಯರು ಸೇರಿ 8 ಮಂದಿಗೆ ಗಾಯ, ಆಸ್ಪತ್ರೆಗೆ ದಾಖಲು

ಕುಂದಾಪುರ: ಕೋಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಣೂರಿನಲ್ಲಿ ಹೆಜ್ಜೇನು ದಾಳಿಯಿಂದ ಇಬ್ಬರು ಮಹಿಳೆಯರೂ ಸೇರಿ ಎಂಟು ಮಂದಿ ಗಂಭೀರ ಗಾಯಗೊಂಡ ಘಟನೆ ಬುಧವಾರ  ಬೆಳಿಗ್ಗೆ ಸಂಭವಿಸಿದೆ.

ನಾಗಬನವೊಂದರಲ್ಲಿ ಸರ್ಪಸಂಸ್ಕಾರ ಕಾರ್ಯಕ್ರಮ ನಡೆಯುತ್ತಿತ್ತು. ಹೋಮ ಮಾಡುವುದಕ್ಕಾಗಿ ಹೋಮಕುಂಡಕ್ಕೆ ಬೆಂಕಿ ಹತ್ತಿಸಿದ ಸಂದರ್ಭ ಈ ಘಟನೆ ನಡೆದಿದೆ. ಬನದ ಸಮೀಪವಿರುವ ಮರದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನುಗಳು ಹೋಮದ ಹೊಗೆಯಿಂದ ಕೆರಳಿ ಸ್ಥಳದಲ್ಲಿದ್ದವರ ಮೇಲೆ ಏಕಾಏಕಿ ದಾಳಿ ನಡೆಸಿದವು. 

ಈ ದಾಳಿಯಿಂದ ಇಬ್ಬರು ಮಹಿಳೆಯರು ಹಾಗೂ ಐವರು ಪುರುಷರು ಗಾಯಗೊಂಡಿದ್ದಾರೆ. ರಕ್ಷಣೆಗೆ ಧಾವಿಸಿಬಂದ ಸ್ಥಳೀಯರಾದ ಸಮಾಜ ಸೇವಕ ವಸಂತ ಸುವರ್ಣ ಅವರಿಗೂ ಹೆಜ್ಜೇನು ಕಚ್ಚಿದೆ.

 ಗಾಯಾಳುಗಳನ್ನು ತಕ್ಷಣ ಜೀವನ್ ಮಿತ್ರ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article