
ಗ್ರಾ.ಪಂ. ಕಚೇರಿಯಲ್ಲಿ ನಮಾಜು
Saturday, January 4, 2025
ಕುಂದಾಪುರ: ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಮುಸ್ಲಿಂ ಧರ್ಮಗುರು (ಮೌಲ್ವಿ) ನಮಾಜು ನಡೆಸಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಿಂದೂ ಸಂಘಟನೆಗಳು ಅಕ್ರೋಶ ವ್ಯಕ್ತಪಡಿಸಿವೆ.
ಇತ್ತೀಚೆಗೆ ನಡೆದ ಗಂಗೊಳ್ಳಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಎಸ್ಡಿಪಿಐ ಮೈತ್ರಿಕೂಟ ಅಧಿಕಾರಕ್ಕೆ ಬಂದಿದ್ದು, ಗುರುವಾರ ಅಧಿಕಾರ ಹಂಚಿಕೆ ನಡೆದಿತ್ತು.
ಕಾಂಗ್ರೆಸ್ನ ಜಯಂತಿ ಖಾರ್ವಿ ಗ್ರಾ.ಪಂ. ಅಧ್ಯಕ್ಷೆ ಹಾಗೂ ಎಸ್ಡಿಪಿಐ ಬೆಂಬಲಿತ ಸದಸ್ಯ ತಬ್ರೇಜ್ ಉಪಾಧ್ಯಕ್ಷರಾಗಿದ್ದಾರೆ. ತಬ್ರೇಜ್ ಅಧಿಕಾರ ಸ್ವೀಕಾರ ವೇಳೆ ಎಸ್ಡಿಪಿಐ ಮುಖಂಡರು ಮೌಲ್ವಿಯನ್ನು ಕರೆಸಿ ಪ್ರಾರ್ಥನೆ ಮಾಡಿಸಿರುವ ವೀಡಿಯೊ ವೈರಲ್ ಆಗಿದ್ದು, ಇದು ಹಿಂದೂ ಸಂಘಟನೆಗಳನ್ನು ಕೆರಳಿಸಿದೆ.