
ಗೋವಿನ ಮೇಲಿನ ಅಮಾನವೀಯ ಕ್ರೌರ್ಯ: ವಿಶ್ವ ಹಿಂದೂ ಪರಿಷದ್ ಖಂಡನೆ
Tuesday, January 14, 2025
ಮಂಗಳೂರು: ಬೆಂಗಳೂರಿನಲ್ಲಿ ಗೋವಿನ ಕೆಚ್ಚಲನ್ನು ಕತ್ತರಿಸಿ ಅಮಾನವೀಯ ಕ್ರೌರ್ಯ ಮೆರೆದಿರುವುದು ಖಂಡನೀಯ. ಕೋಮುಗಲಭೆಗೆ ಪ್ರಚೋದನೆ ನೀಡಲು ಬಹುಸಂಖ್ಯಾತ ಹಿಂದೂಗಳ ಆರಾಧ್ಯ ದೇವರಾದ ಗೋವಿಗೆ ಅಮಾನವೀಯ ಕೃತ್ಯವೆಸಗಿದ್ದಾರೆ.
ಜಿಹಾದಿ ಮಾನಸಿಕತೆಯ ಈ ಕೃತ್ಯವನ್ನು ಮಾಡಿದ ಆರೋಪಿಗೆ ಮಾನಸಿಕ ಅಸ್ವಸ್ಥನೆಂದು ಬಿಂಬಿಸಿ ಪ್ರಕರಣವನ್ನು ಮುಚ್ಚಿಹಾಕಲು ಕಾಂಗ್ರೆಸ್ ಸರಕಾರ ಪ್ರಯತ್ನಿಸುತ್ತಿದ್ದು, ಇದರಿಂದ ಜಿಹಾದಿ ಕೃತ್ಯವನ್ನು ರಾಜ್ಯದಲ್ಲಿ ಇನ್ನಷ್ಟು ಬೆಳೆಸುತ್ತಿರುವುದಕ್ಕೆ ಸಾಕ್ಷಿಯಾಗಿದೆ.
ಈ ರಾಕ್ಷಸಿ ಕೃತ್ಯದ ಹಿಂದೆ ಇರುವವರನ್ನು ಪತ್ತೆ ಹಚ್ಚಲು ಉನ್ನತಮಟ್ಟದ ತನಿಖೆ ನಡೆಸಬೇಕೆಂದು ವಿಶ್ವ ಹಿಂದೂ ಪರಿಷದ್ ಜಿಲ್ಲಾ ಅಧ್ಯಕ್ಷ ಎಚ್.ಕೆ. ಪುರುಷೋತ್ತಮ ಪ್ರಕಟಣೆಯಲ್ಲಿ ಅಗ್ರಹಿಸಿದ್ದಾರೆ.