ವ್ಯಸನಮುಕ್ತ ಸಮಾಜ ರೂಪಿಸುವುದು ಶ್ರೇಷ್ಠ ಹಾಗೂ ಪವಿತ್ರ ಸೇವಾಕಾರ್ಯವಾಗಿದೆ: ಡಿ. ವೀರೇಂದ್ರ ಹೆಗ್ಗಡೆ

ವ್ಯಸನಮುಕ್ತ ಸಮಾಜ ರೂಪಿಸುವುದು ಶ್ರೇಷ್ಠ ಹಾಗೂ ಪವಿತ್ರ ಸೇವಾಕಾರ್ಯವಾಗಿದೆ: ಡಿ. ವೀರೇಂದ್ರ ಹೆಗ್ಗಡೆ


ಉಜಿರೆ: ಧರ್ಮಸ್ಥಳದ ಆಶ್ರಯದಲ್ಲಿ ನಡೆಯುತ್ತಿರುವ ಅನೇಕ ಪವಿತ್ರ ಸೇವಾಕಾರ್ಯಗಳಲ್ಲಿ   ಮದ್ಯವ್ಯಸನಿಗಳನ್ನು  ಮನಪರಿವರ್ತನೆ  ಮೂಲಕ ವ್ಯಸನಮುಕ್ತರನ್ನಾಗಿ ಮಾಡಿ ಆರೋಗ್ಯಪೂರ್ಣ ಸಮಾಜ ರೂಪಿಸುವ ಕಾಯಕ ಅತ್ಯಂತ ಶ್ರೇಷ್ಠ, ಪವಿತ್ರ ಹಾಗೂ ಉತ್ತಮ ಸೇವೆಯಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಶುಕ್ರವಾರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಿದ ಜನಜಾಗೃತಿವೇದಿಕೆಯ ಸರ್ವಸದಸ್ಯರ ಸಮಾವೇಶದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.

ಧರ್ಮಸ್ಥಳದ ಮೇಲಿನ ಭಕ್ತಿ, ಪ್ರೀತಿ, ವಿಶ್ವಾಸ ಮತ್ತು ಗೌರವದಿಂದ ಜನಜಾಗೃತಿವೇದಿಕೆಯ ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ತನು, ಮನ, ಧನದ ಮೂಲದ ತ್ರಿಕರಣಪೂರ್ವಕವಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವುದರಿಂದ ಎಲ್ಲರಿಗೂ ಸಮಾಜದಲ್ಲಿ ವಿಶೇಷ ಗೌರವ, ಮಾನ್ಯತೆ ದೊರಕುತ್ತಿದೆ. ವೇದಿಕೆಯ ಕೀರ್ತಿಯೂ ಹೆಚ್ಚಾಗಿದೆ. ವ್ಯಸನಮುಕ್ತರು ಪವಿತ್ರಾತ್ಮರಾಗಿ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿದಾಗ ಅವರಿಗೆ ವಿಶೇಷ ಅನುಗ್ರಹವಾಗುತ್ತದೆ.  ಮುಂದೆ ಅವರು ನವಜೀವನ ಸಮಿತಿ ಸದಸ್ಯರಾಗಿ ದೃಢಸಂಕಲ್ಪದಿಂದ ಸುಖ-ಶಾಂತಿ ನೆಮ್ಮದಿಯ ಕೌಟುಂಬಿಕ ಜೀವನ ನಡೆಸುವುದು ತಮಗೆ ಹೆಚ್ಚಿನ ಸಂತೋಷ ಮತ್ತು ತೃಪ್ತಿ ನೀಡುತ್ತದೆ ಎಂದು  ಹೇಳಿದರು.

ಜನಜಾಗೃತಿ ವೇದಿಕೆಯ ಸರ್ವಸದಸ್ಯರ ಸಮಾವೇಶವನ್ನು ಉದ್ಘಾಟಿಸಿದ ಹೇಮಾವತಿ ವೀ. ಹೆಗ್ಗಡೆಯವರು ದೇಶದ ಅಮೂಲ್ಯ ಮಾನವಸಂಪನ್ಮೂಲವಾಗಿದ್ದು, ಯುವಜನತೆ ತಮ್ಮ ಬುದ್ಧಿ ಮತ್ತು ವಿವೇಕವನ್ನು ಕಳೆದುಕೊಂಡು  ಮದ್ಯ ವ್ಯಸನಕ್ಕೆ ಬಲಿಯಾಗಬಾರದು ಎಂದು ಕಿವಿಮಾತು ಹೇಳಿದರು.

ವಿಶೇಷ ಸೇವೆ, ಸಾಧನೆ ಮಾಡಿ ಪ್ರಶಸ್ತಿ, ಪುರಸ್ಕಾರ ಪಡೆದ ಕಾರ್ಯಕರ್ತರನ್ನು ಅಭಿನಂದಿಸಲಾಯಿತು.

ಸತೀಶ್ ಬಳೆಗಾರ ಬರೆದ “ಕತ್ತಲ ಕುಡುಕರ  ಬೆಳಕಿನ ಮಕ್ಕಳು”  ಎಂಬ ಕೃತಿಯನ್ನು ಶ್ರದ್ಧಾಅಮಿತ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಮಧ್ಯಪಾನ ಆಧುನಿಕ ಜೀವನಶೈಲಿಯಾಗಿದೆ ಎಂಬ ಭ್ರಮೆಯ ಆತಂಕವಿದೆ. ಮದ್ಯವ್ಯಸನಿಗಳ ಮಕ್ಕಳ ಬಾಳಿನ ಗೋಳು ವರ್ಣಿಸಲಸದಳವಾಗಿದ್ದು, ಮಕ್ಕಳು ಪೋಷಕರ ಪ್ರೀತಿ, ಭದ್ರತೆ,  ರಕ್ಷಣೆಯಿಂದ, ವಂಚಿತರಾಗುತ್ತಾರೆ. ಹಾಗಾಗಿ ಶಾಲಾ-ಕಾಲೇಜುಗಳಲ್ಲಿ “ಸ್ವಾಸ್ಥಸಂಕಲ್ಪ”  ಕಾರ್ಯಕ್ರಮದ ಮೂಲಕ ಮದ್ಯಪಾನದ ದುಷ್ಪರಿಣಾಮಗಳ ಬಗ್ಗೆ  ವಿದ್ಯಾರ್ಥಿಗಳಿಗೆ ಅರಿವು, ಜಾಗೃತಿ ಮೂಡಿಸಲಾಗುತ್ತದೆ ಎಂದರು.

ಕೊಪ್ಪಳ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ನಟರಾಜ ಬಾದಾಮಿ ಅವರನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ  ಟ್ರಸ್ಟ್‌ನ ನೂತನ ರಾಜ್ಯ ಸಂಘಟನೆಯ ನೂತನ ರಾಜ್ಯ ಸಂಘಟನಾ  ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ರಾಜ್ಯ ಸಂಘಟನಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ರಾಜಣ್ಣ ಕೊರವಿ ಅವರನ್ನು ಗೌರವಿಸಲಾಯಿತು. 

ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಆಶಯ  ನುಡಿಗಳೊಂದಿಗೆ ಯೋಜನೆಯ ಸೇವೆ, ಸಾಧನೆಯ ಪಕ್ಷಿನೋಟ ವಿವರಿಸಿದರು.

ಜನಜಾಗೃತಿ ವೇದಿಕೆ  ಟ್ರಸ್ಟ್ನ ಕಾರ್ಯದರ್ಶಿ ವಿವೇಕ್ ವಿ. ಪಾಯ್ಸ್   ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ರಾಮಸ್ವಾಮಿ  ವಂದಿಸಿದರು.

ಜನಜಾಗೃತಿ  ವೇದಿಕೆಯ ಯೋಜನಾಧಿಕಾರಿಗಳಾದ ಗಣೇಶ ಆಚಾರ್ಯ ಮತ್ತು ನಾಗರಾಜ ಕಾರ್ಯಕ್ರಮ ನಿರ್ವಹಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article