
ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆಯಲ್ಲಿ ಬಹುಮಾನ
Wednesday, January 1, 2025
ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡವು ಇತ್ತೀಚಿಗೆ ಮೈಸೂರಿನ ಎನ್.ಐ.ಇ ಕಾಲೇಜಿನಲ್ಲಿ ನಡೆದ ವೈದ್ಯುತೆಕ್ ವಿಎಲ್ಎಸ್ಐ ಕೋಡಿಂಗ್ ಎಂಬ ವಿಷಯದ ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ದೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದೆ.
ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ವಿಭಾಗದ ಚೇತನ್, ಅನಿರುದ್ದ ಕುಲಕರ್ಣಿ, ಭರಣ್, ಫಲ್ಘುಣ ಮತ್ತು ಸೃಜನ್ ತಂಡದ ಸದಸ್ಯರಾಗಿದ್ದರು.
ವಿದ್ಯಾರ್ಥಿಗಳ ಈ ಸಾಧನೆಯನ್ನು ಅಧ್ಯಕ್ಷ ಡಾ. ವೀರೇಂದ್ರ ಹೆಗ್ಗಡೆ, ಕಾರ್ಯದರ್ಶಿಗಳಾದ ಹರ್ಷೇಂದ್ರ ಕುಮಾರ್ ಮತ್ತು ಡಾ. ಸತೀಶ್ಚಂದ್ರ, ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.