ಚಾಕುವಿನಿಂದ ಇರಿದು ಕಾವಲುಗಾರನ ಕೊಲೆ

ಚಾಕುವಿನಿಂದ ಇರಿದು ಕಾವಲುಗಾರನ ಕೊಲೆ

ಕಾಸರಗೋಡು: ಕಾವಲುಗಾರರೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಗೈದ ಘಟನೆ ಉಪ್ಪಳ ಪೇಟೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. 

ಪಯ್ಯನ್ನೂರು ನಿವಾಸಿ ಸುರೇಶ್ (45) ಕೊಲೆಗೀಡಾದವರು. ಉಪ್ಪಳ ಪೇಟೆಯಲ್ಲಿ ರಾತ್ರಿ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಗಂಭೀರ ಸ್ಥಿತಿಯಲ್ಲಿದ್ದ ಸುರೇಶ್ ರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ತಡರಾತ್ರಿ ಮೃತಪಟ್ಟರು.

ಉಪ್ಪಳ ನಿವಾಸಿ ಸವಾದ್ ಈ ಕೃತ್ಯ ನಡೆಸಿರುವುದಾಗಿ ಪೊಲೀಸರಿಗೆ ಮಾಹಿತಿ ಲಭಿಸಿದೆ. ಸುರೇಶ್ ಉಪ್ಪಳದ ಫ್ಲ್ಯಾಟ್ ವೊಂದರ ಕಾವಲುಗಾರರಾಗಿ ಕೆಲಸ ನಿರ್ವಹಿಸುತ್ತಿದ್ದರು. ಸುರೇಶ್ ಮತ್ತು ಸವಾದ್ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಕೊಲೆಯಲ್ಲಿ ಕೊನೆಗೊಂಡಿದೆ. ಮಂಜೇಶ್ವರ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article