ದಾಂಧಲೆ ಪ್ರಕರಣ: ಆರೋಪಿಗಳಿಗೆ ಜಾಮೀನು

ದಾಂಧಲೆ ಪ್ರಕರಣ: ಆರೋಪಿಗಳಿಗೆ ಜಾಮೀನು

ಮಂಗಳೂರು: ನಗರದ ಯುನಿಸೆಕ್ಸ್ ಸೆಲೂನ್, ಮಸಾಜ್ ಪಾರ್ಲರ್‌ನಲ್ಲಿ ನಡೆದ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಸೇನೆಯ ಸ್ಥಾಪಕ ಅಧ್ಯಕ್ಷ ಪ್ರಸಾದ್ ಅತ್ತಾವರ ಸಹಿತ 11 ಮಂದಿ ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.

ಈ ಪ್ರಕರಣದಲ್ಲಿ 14 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಆ ಪೈಕಿ ಮೂವರು ಜಾಮೀನಿಗೆ ಅರ್ಜಿ ಸಲ್ಲಿಸಿರಲಿಲ್ಲ. ಅರ್ಜಿ ಸಲ್ಲಿಸಿದ 11 ಮಂದಿಗೆ ನ್ಯಾಯಾಧೀಶರು ಷರತ್ತುಬದ್ಧ ಜಾಮೀನು ನೀಡಿದ್ದಾರೆ. 

ಜ.23 ರಂದು ನಗರದ ಬಿಜೈನಲ್ಲಿರುವ ಕಲರ್ಸ್ಚ ಯುನಿಸೆಕ್ಸ್ ಸೆಲೂನ್ಗೆ ನುಗ್ಗಿ ಆರೋಪಿಗಳು ದಾಂಧಲೆ ನಡೆಸಿದ್ದರು. ಬಳಿಕ ಆ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ತಕ್ಷಣ ಎಚ್ಚೆತ್ತುಕೊಂಡ ಬರ್ಕೆ ಪೊಲೀಸರು ಪ್ರಸಾದ್ ಅತ್ತಾವರ ಸಹಿತ 14 ಮಂದಿಯನ್ನು ಬಂಧಿಸಿದ್ದರು. ಆರೋಪಿಗಳಿಗೆ ಮಂಗಳೂರಿನ 6ನೆ ಜೆಎಂಎಫ್ಸಿ ನ್ಯಾಯಾಲಯ ಫೆ.7ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article