
ಜಾರಂದಾಯ ದೈವದ ಮೊರೆ ಹೋದ ತಮಿಳು ನಟ ವಿಶಾಲ್
Wednesday, February 12, 2025
ಮಂಗಳೂರು: ಇತ್ತೀಚೆಗೆ ತೆರೆಕಂಡ ತಮಿಳು ಚಿತ್ರ ಮದಗಜರಾಜ ಚಿತ್ರದ ಪ್ರಚಾರದ ವೇಳೆ ತಮ್ಮ ಅನಾರೋಗ್ಯದಿಂದ ಸುದ್ದಿಯಾಗಿದ್ದ ತಮಿಳಿಣ ಖ್ಯಾತ ನಟ ವಿಶಾಲ್ ಮಂಗಳೂರಿನಲ್ಲಿ ನಡೆದ ಜಾರಂದಾಯ ದೈವದ ನೇಮೋತ್ಸವದಲ್ಲಿ ಭಾಗಿಯಾಗಿ ದೈವದ ಆಶೀರ್ವಾದ ಪಡೆದರು.
ಮಂಗಳವಾರ ರಾತ್ರಿ ಮೂಲ್ಕಿ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ವಾರ್ಷಿಕ ನೇಮ ನಡೆದಿದ್ದು, ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ, ಸುಮಾರು ಮೂರು ಗಂಟೆಗಳ ಕಾಲ ಭಕ್ತಿಯಿಂದ ಜಾರಂದಾಯ ನೇಮವನ್ನು ವೀಕ್ಷಿಸಿದರು.
ತಮ್ಮ ಆರೋಗ್ಯದ ವಿಚಾರಕ್ಕೆ ತುಳುನಾಡಿನ ದೈವದ ಮೊರೆ ಹೋಗಿರುವ ನಟ ವಿಶಾಲ್ ಇದಕ್ಕಾಗಿ ದೈವಕ್ಕೆ ಪ್ರಾರ್ಥನೆ ಸಲ್ಲಿಸಿದ್ದು, ಈ ವೇಳೆ ತುಳುನಾಡಿನ ದೈವ ಅಭಯ ನೀಡಿದ್ದು ಕಣ್ಣೀರು ಹಾಕಬೇಡ, ನಾನಿದ್ದೇನೆ. ನಿನ್ನ ಆರೋಗ್ಯ ಸರಿಯಾಗಲಿದೆ. ಗುಣಮುಖನಾಗಿ ಬಂದು ತುಲಾಭಾರ ಸೇವೆ ಅರ್ಪಿಸು ಎಂದು ದೈವ ಅಭಯ ನೀಡಿದೆ. ಸಂಪೂರ್ಣ ಗುಣಮುಖವಾಗಿ ಬಂದು ಶ್ರೀ ಕ್ಷೇತ್ರದಲ್ಲಿ ತುಲಾಭಾರ ಸೇವೆ ಸಮರ್ಪಿಸಲು ಅರ್ಚಕರು ಸೂಚಿಸಿದ ಹಿನ್ನೆಲೆಯಲ್ಲಿ ಅವರು ಒಪ್ಪಿಕೊಂಡರು.