ಅಳಪೆ ಉತ್ತರ ವಾರ್ಡಿನ ಪ್ರಾಥಮಿಕ ಆರೋಗ್ಯ ಕೇಂದ್ರ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ

ಅಳಪೆ ಉತ್ತರ ವಾರ್ಡಿನ ಪ್ರಾಥಮಿಕ ಆರೋಗ್ಯ ಕೇಂದ್ರ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕಾಮತ್ ಗುದ್ದಲಿಪೂಜೆ


ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 51ನೇ ಅಳಪೆ ಉತ್ತರ ವಾರ್ಡಿನ ಪ್ರಾಥಮಿಕ ಆರೋಗ್ಯ ಕೇಂದ್ರ ಪಡೀಲ್, ಇದರ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಇಂದು ನೆರವೇರಿಸಲಾಯಿತು.

ಬಳಿಕ ಅವರು ಮಾತನಾಡಿ, ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿಯ ಅಗತ್ಯತೆಯ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯೆ ರೂಪಶ್ರೀ ಪೂಜಾರಿ ಅವರು ಅನೇಕ ಬಾರಿ ಪ್ರಸ್ತಾಪಿಸಿದ್ದರು. ಇದೀಗ ಶಾಸಕರ ಅನುದಾನವನ್ನು ಬಳಸಿಕೊಂಡು ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು ಶೀಘ್ರವಾಗಿ ಪೂರ್ಣಗೊಳಿಸಲು ಸಹ ಕ್ರಮ ವಹಿಸಲಾಗುವುದು ಎಂದು ಹೇಳಿದರು.


ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಕಿರಣ್ ರೈ, ಸುರೇಶ್ ಆಚಾರ್, ಮೋಹನ್ ದಾಸ್ ಶೆಟ್ಟಿ, ಜಿತೇಶ್ ಪಡೀಲ್, ಅಶೋಕ್ ಪಡೀಲ್, ಲತಾ ಟೀಚರ್, ರಾಕೇಶ್, ಸುಜಾತ ಮಾರ್ಲ, ಹಾಗೂ ಡಾ.ದಿನೇಶ್ ಸೇರಿದಂತೆ ಆರೋಗ್ಯ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.




Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article