
ದೆಹಲಿಯಲ್ಲಿ ಬಿಜೆಪಿಗೆ ಗೆಲುವು: ಮೂಡುಬಿದಿರೆ ಮಂಡಲದಿಂದ ಸಂಭ್ರಮಾಚರಣೆ
Saturday, February 8, 2025
ಮೂಡುಬಿದಿರೆ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಮುಲ್ಕಿ-ಮೂಡುಬಿದಿರೆ ಮಂಡಲದ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಯಿತು.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಪ್ರಧಾನ ಕಾರ್ಯದರ್ಶಿಯರಾದ ರಂಜಿತ್ ಪೂಜಾರಿ, ಕಾರ್ಯದರ್ಶಿ ಸಾತ್ವಿಕ್ ಮಲ್ಯ, ಕೊಶಾಧಿಕಾರಿ ಪ್ರಭಾಕರ್ ಕುಲಾಲ್, ಪುರಸಭೆ ಉಪಾಧ್ಯಕ್ಷ ನಾಗರಾಜ ಪೂಜಾರಿ, ಪುರಸಭಾ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ನಗರ ಬಿಜೆಪಿ ಅಧ್ಯಕ್ಷ ಲಕ್ಮಣ ಪೂಜಾರಿ, ಕಾರ್ಯದರ್ಶಿ ಯಶವಂತ್, ಪುತ್ತಿಗೆ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ಶಿವಕುಮಾರ್, ಪಕ್ಷದ ಪ್ರಮುಖ ಪದಾಧಿಕಾರಿಗಳಾದ ದಿನೇಶ್ ಮಾರೂರು, ಶಶಿಧರ್ ಅಂಚನ್ ಎನಕ್ರಿಪಲ್ಲ, ನಾಗೇಶ್ ಅಮೀನ್, ಸಂಪತ್ ಪೂಜಾರಿ ನೆತ್ತೋಡಿ, ಸಚಿನ್ ಪಣಪಿಲ, ಪ್ರಶಾಂತ್ ಅಮೀನ್, ಸುದರ್ಶನ ಆಚಾರ್ಯ, ಕಾರ್ತಿಕ್ ಸೇರಿದಂತೆ ಪಕ್ಷದ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.