
ಕುಂಬಾರ ಗುಡಿಕೈಗಾರಿಕಾ ಸಂಘದ ಅಧ್ಯಕ್ಷರಾಗಿ ಭಾಸ್ಕರ ಎಂ. ಪೆರುವಾಯಿ ಪುನರಾಯ್ಕೆ
ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಯ ನೂತನ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಪುನರಾಯ್ಕೆಗೊಂಡ ಭಾಸ್ಕರ ಎಂ. ಪೆರುವಾಯಿ ಮತ್ತು ಉಪಾಧ್ಯಕ್ಷರಾದ ದಾಮೋದರ್ ಕುಲಾಲ್ ಅವರಿಗೆ ಅಭಿನಂದನೆ ಹಾಗೂ ಕುಲಾಲ ಸಹಕಾರ ಭವನದ ಮೇಲಂತಸ್ತಿನ ಸಭಾಂಗಣದ ಉದ್ಘಾಟನೆ ಸೋಮವಾರ ನಡೆಯಿತು.
ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ದಿನೇಶ್ ಪಿ. ವಿ. ಅವರು ನೂತನ ಸಭಾಂಗಣವನ್ನು ಉದ್ಘಾಟಿಸಿ ಶುಭಹಾರೈಸಿದರು.
ಸಭಾಂಗಣ ಉಚಿತ:
ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಅಧ್ಯಕ್ಷ ಭಾಸ್ಕರ್ ಎಂ. ಪೆರುವಾಯಿ ಮಾತನಾಡಿ, ಮುಂದಿನ 5 ವರ್ಷಗಳ ಅವಧಿಗೆ ತಮ್ಮನ್ನು ಪುನರಾಯ್ಕೆ ಮಾಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ನೂತನ ಈ ಸಭಾಂಗಣ ಮುಂದಿನ ದಿನಗಳಲ್ಲಿ ಕುಂಬಾರರ ಸಂಘ, ಸಹಕಾರ ಸಂಘಗಳ ಕಾರ್ಯಕ್ರಮಗಳಿಗೆ ಉಚಿತವಾಗಿ ನೀಡಲಾಗುವುದು. ಮುಂದಿನ 5 ವರ್ಷದಲ್ಲಿ 25 ಶಾಖೆಗಳ ಗುರಿಯನ್ನು ಇಟ್ಟುಕೊಂಡು ನೂರು ಮಂದಿಗೆ ಉದ್ಯೋಗ ಕೊಡುವ ಯೋಜನೆ ಇಟ್ಟು ಕೊಂಡಿದ್ದೇವೆ ಎಂದರು.
ಪುತ್ತೂರು ಕುಲಾಲ ಸಂಘದ ಅಧ್ಯಕ್ಷ ಶೇಷಪ್ಪ ಕುಲಾಲ್, ಹಿರಿಯ ನ್ಯಾಯವಾದಿ ಉದಯರವಿ ಕುಂಬ್ಲಾಜೆ ಶುಭ ಹಾರೈಸಿದರು. ಕುಲಾಲ ಸಂಘದ ಕಾರ್ಯದರ್ಶಿ ರವಿ ಪಿ. ಕುಲಾಲ್, ಮಾಣಿ ಕುಲಾಲ ಸಂಘದ ಅಧ್ಯಕ್ಷ ಮೋಹನ್ ಕುಲಾಲ್, ವಿಟ್ಲ ಸಂಘದ ಅಧ್ಯಕ್ಷ ಬಾಬು ಬಿ.ಕೆ., ಬೆಳ್ಳಾರೆ ಸಂಘದ ಅಧ್ಯಕ್ಷ ರಾಮಣ್ಣ ಮೂಲ್ಯ, ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ನಿರ್ದೇಶಕರಾದ ನಾಗೇಶ್ ಕುಲಾಲ್, ಪದ್ಮ ಕುಮಾರ್ ಎಚ್., ಬಿ.ಎಸ್. ಕುಲಾಲ್, ಸೇಸಪ್ಪ ಕುಲಾಲ್, ಗಣೇಶ್ ಪಿ., ಪ್ರಶಾಂತ್ ಬಂಜನ್, ರಂಜಿತ, ರೇಖಾ ದಿನೇಶ, ಪೂವಪ್ಪ ಕಡಂಬಾರ್ ವೇದಿಕೆಯಲ್ಲಿದ್ದರು.
ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜನಾರ್ಧನ ಮೂಲ್ಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕುಲಾಲ್ ಸಂಘದ ರವಿ ಕೈತ್ತಡ್ಕ, ತೇಜ ಕುಮಾರ್, ಮಾಜಿ ಪುರಸಭೆ ಅಧ್ಯಕ್ಷ ಗಣೇಶ್ ರಾವ್, ಕೊಂಬೆಟ್ಟು ಸರ್ಕಾರಿ ಪ್ರೌಢ ಶಾಲೆಯ ಉಪಪ್ರಾಂಶುಪಾಲ ವಸಂತ ಮೂಲ್ಯ, ಉದ್ಯಮಿ ಸಂತೋಷ್ ರೈ ನಳಿಲು ಸಹಿತ ಹಲವು ಮಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.