ಟಿಪ್ಪರ್ ಪಲ್ಟಿ: ಸ್ಥಳದಲ್ಲೇ ಚಾಲಕ ದಾರುಣ ಸಾವು

ಟಿಪ್ಪರ್ ಪಲ್ಟಿ: ಸ್ಥಳದಲ್ಲೇ ಚಾಲಕ ದಾರುಣ ಸಾವು


ಶಿರ್ವ: ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಬೆಳ್ಳೆ ಸಮೀಪದ ಕಟ್ಟಿಂಗೇರಿ ಗಣಪಣಕಟ್ಟೆಯ ತಿರುವಿನಲ್ಲಿ ಮಂಗಳವಾರ ಮುಂಜಾನೆ ಸುಮಾರು ೪ ಗಂಟೆಯ ಸುಮಾರಿಗೆ ಟಿಪ್ಪರ್‌ಲಾರಿ ಪಲ್ಟಿಯಾಗಿ ಚಾಲಕ ಟಿಪ್ಪರ್ ಅಡಿಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. 

ಮೃತರನ್ನು ಬೈಂದೂರಿನ ಸುಬ್ರಹ್ಮಣ್ಯ ಆಚಾರ್ಯ (40) ಎಂದು ಗುರುತಿಸಲಾಗಿದೆ.

ಟಿಪ್ಪರ್ ಬೈಂದೂರಿನಿಂದ ಪಳ್ಳಿಯ ಕೋರೆಗೆ ಜಲ್ಲಿ ತರಲು ಹೋಗುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರಸ್ತೆಯಲ್ಲಿ ಪಲ್ಟಿಯಾಗಿದೆ. ಪರಿಣಾಮ ಚಾಲಕ ಸುಬ್ರಹ್ಮಣ್ಯ ಟಿಪ್ಪರ್ ಅಡಿಗೆ ಬಿದ್ದು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. 

ಘಟನೆಯ ಬಳಿಕ ಸ್ಥಳಕ್ಕೆ ಧಾಮಿಸಿದ ಬೆಳ್ಳೆ ಗ್ರಾ.ಪಂ. ಸದಸ್ಯರಾದ ಗುರುರಾಜ್ ಭಟ್, ಸುಧಾಕರ ಪೂಜಾರಿ, ಕೃಷ್ಣ ಆಚಾರ್ಯ, ಶಿರ್ವ ಪೊಲೀಸ್ ಸಿಬ್ಬಂದಿಯವರ  ಸಹಕಾರದೊಂದಿಗೆ ಜೆಸಿಬಿ ಮೂಲಕ ಲಾರಿಯನ್ನು ಎತ್ತಿ ಚಾಲಕನ ಮೃತ ದೇಹವನ್ನು ಹೊರತೆಗೆದು ಉಡುಪಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದಾರೆ. 

ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article