ಟಿಪ್ಪರ್ ಢಿಕ್ಕಿ: ಪಾದಚಾರಿ ಮೃತ್ಯು‌

ಟಿಪ್ಪರ್ ಢಿಕ್ಕಿ: ಪಾದಚಾರಿ ಮೃತ್ಯು‌

ಬಂಟ್ವಾಳ: ರಸ್ತೆ ದಾಟುವ ವೇಳೆ ಪಿಕಪ್  ಢಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಶನಿವಾರ ರಾತ್ರಿ ರಾ.ಹೆ.ಯ ತುಂಬೆಯಲ್ಲಿ  ನಡೆದಿದೆ.

ಸ್ಥಳೀಯ ನಿವಾಸಿ ಮಹಾಬಲ (47) ಮೃತಪಟ್ಟವರೆಂದು ಗುರುತಿಸಲಾಗಿದೆ.

ಇವರು ತುಂಬೆಯಲ್ಲಿ ಅಂಗಡಿಯೊಂದರಿಂದ ವಾಪಸ್ ಮನೆಗೆ ಹೋಗುವುದಕ್ಕೆ ರಸ್ತೆ ದಾಟುವ ವೇಳೆ ಮಂಗಳೂರು ಕಡೆಯಿಂದ ‌ಬಿ.ಸಿ.ರೋಡಿನತ್ತ‌ತೆರಳುತ್ತಿದ್ದ‌ ಪಿಕಪ್ ವಾಹನ ಢಿಕ್ಕಿಯಾಗಿದ್ದು, ಗಂಭೀರ ಸ್ವರೂಪದ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸುವ ವೇಳೆ ಅವರನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆನ್ನಲಾಗಿದೆ.

ಈ ಬಗ್ಗೆ ಬಂಟ್ವಾಳ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article