ಪೂರ್ವ ಪ್ರಾಥಮಿಕ ತರಗತಿಗಳು ಮಕ್ಕಳ ಜೀವನದಲ್ಲಿ ಬದುಕನ್ನು ಕಟ್ಟಿಕೊಳ್ಳುವ ಅಡಿಪಾಯ: ಶಿಕ್ಷಣಾಧಿಕಾರಿ ಮಂಜುನಾಥನ್

ಪೂರ್ವ ಪ್ರಾಥಮಿಕ ತರಗತಿಗಳು ಮಕ್ಕಳ ಜೀವನದಲ್ಲಿ ಬದುಕನ್ನು ಕಟ್ಟಿಕೊಳ್ಳುವ ಅಡಿಪಾಯ: ಶಿಕ್ಷಣಾಧಿಕಾರಿ ಮಂಜುನಾಥನ್


ಬಂಟ್ವಾಳ: ಮಗು ತನ್ನ ಮನೆಯಿಂದ ಹೊರಗಿನ ಪ್ರಪಂಚಕ್ಕೆ ಕಲಿಕೆಯ ವಾತಾವರಣಕ್ಕೆ ಹೋಗುವ ಸನ್ನಿವೇಶವೇ ಪೂರ್ವ ಪ್ರಾಥಮಿಕ ತರಗತಿಗಳು ಮಕ್ಕಳ ಜೀವನದಲ್ಲಿ ಬದುಕನ್ನು ಕಟ್ಟಿಕೊಳ್ಳುವ ಅಡಿಪಾಯವಾಗಿದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಹೇಳಿದ್ದಾರೆ.

ಶುಕ್ರವಾರ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಮಜಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪೂರ್ವ ಪ್ರಾಥಮಿಕ ತರಗತಿಯ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಗುಣಮಟ್ಟದ ಶಿಕ್ಷಣದೊಂದಿಗೆ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವುದರ ಮೂಲಕ ಮಜಿ ಶಾಲೆಯು ತಾಲೂಕಿಗೆ ಮಾದರಿ ಶಾಲೆಯಾಗಿದೆ ಅಂದರು.

ಯಾವುದೇ ಮಾಧ್ಯಮಗಳಾಗಿರಲಿ ಕಲಿಕೆ ಮುಖ್ಯವಾಗಿದೆ, ಸಂತಸದಾಯಕ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಕಲಿವಿನ ಬಗ್ಗೆ ಆಸಕ್ತಿಯು ಮೂಡುತ್ತದೆ ಇದನ್ನು ಪೂರ್ವ ಪ್ರಾಥಮಿಕ ತರಗತಿಗಳು ಮುಂದಿನ ಹಂತಗಳಿಗೆ ಮಕ್ಕಳನ್ನು ಹೊಂದಿಕೊಳ್ಳುವಂತೆ ಮಾಡುತ್ತವೆ ಎಂದರು.

ಪೂರ್ವ ಪ್ರಾಥಮಿಕ ಮಕ್ಕಳಿಗೆ ಪದಗ್ರಹಣದ ಸಮವಸ್ತ್ರ ವನ್ನು ಉಚಿತವಾಗಿ ಒದಗಿಸಿದ ಶ್ರೀ ಸಾಯಿ ಅರ್ಥ್ ಮೂವರ್ಸ್ ಮಾಲಕ ಕಿಶೋರ್ ಕುಮಾರ್ ಕಟ್ಟೆಮಾರ್ ಅವರು ಮಾತನಾಡಿ, ಸರಕಾರಿ ಶಾಲೆಗಳು ಉತ್ತಮವಾದ ಕಲಿಕಾ ಪರಿಸರವನ್ನು ಹೊಂದಿದ್ದು ಗುಣಮಟ್ಟದ ಶಿಕ್ಷಣವನ್ನು ನೀಡುವಲ್ಲಿ ಸಫಲತೆಯನ್ನು ಪಡೆದಿವೆ, ಇಂದಿನ ಸಮಾಜದಲ್ಲಿ ಸರಕಾರಿ ಶಾಲೆಗಳಲ್ಲಿ ಕಲಿತ ವಿದ್ಯಾರ್ಥಿಗಳು ಉನ್ನತ ಸ್ಥಾನದ ಹುದ್ದೆಗಳಲ್ಲಿ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ ಅಲ್ಲದೆ ಸರಕಾರಿ ಶಾಲೆಗಳು ಜೀವನಕ್ಕೆ ಹತ್ತಿರವಾದ ಕಲಿಕೆಯನ್ನು ಮೂಡಿಸುತ್ತದೆ ಎಂದರು.

ಶಾಲಾ ಹಿರಿಯ ವಿದ್ಯಾರ್ಥಿ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ನಿರ್ದೇಶಕ ವಿಶ್ವನಾಥ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಪ್ರಾಯೋಜಕತ್ವದಲ್ಲಿ ನೀಡಲಾದ ದೈಹಿಕ ಶಿಕ್ಷಣ ಪಠ್ಯದ ಪೂರಕ ವಾದ್ಯಗಳನ್ನು ಹಸ್ತಾಂತರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಶಿಕ್ಷಕಿ ಹೇಮಲತಾ ರವರನ್ನು ಶಾಲಾ ಪರವಾಗಿ ಅಭಿನಂದಿಸಿ ಶಾಲೆಯಿಂದ ಬೀಳ್ಕೊಡಲಾಯಿತು. ಪೂರ್ವ ಪ್ರಾಥಮಿಕ ತರಗತಿಯ ಮಕ್ಕಳಿಂದ ಅಭಿನಯ ಗೀತೆ, ನೃತ್ಯ ಹಾಗೂ ತಮ್ಮ ಅನುಭವವನ್ನು ಮಾತಿನ ಮೂಲಕ ಹಂಚಿಕೊಂಡರು.

ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೊರಗಪ್ಪ ನಾಯ್ಕ ಸಿಂಗೇರಿ, ವಿರಕಂಬ ಗ್ರಾಮ ಪಂಚಾಯತ್ ಸದಸ್ಯ ಮೀನಾಕ್ಷಿ ಸುನಿಲ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಪೂರ್ವ ಪ್ರಾಥಮಿಕ ಮಕ್ಕಳ ಪೋಷಕರು, ಹಿರಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮುಖ್ಯ ಶಿಕ್ಷಕಿ ಬೆನೆಡಿಕ್ಟ್ ಆಗ್ನೇಸ್ ಮಂಡೋನ್ಸಾ ಸ್ವಾಗತಿಸಿ, ಸಹ ಶಿಕ್ಷಕಿ ಸಂಗೀತ ಶಮಾ೯ ಪಿ.ಜಿ. ವಂದಿಸಿದರು. ಶಿಕ್ಷಕಿಯರಾದ ಪಲ್ಲವಿ ಹಾಗೂ ಹರಿಣಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article