ಮೇ.3 ರಂದು ಮುನಿಯಾಲ್‌ನಲ್ಲಿ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟ

ಮೇ.3 ರಂದು ಮುನಿಯಾಲ್‌ನಲ್ಲಿ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟ


ಕಾರ್ಕಳ: ಶ್ರೀಅರ್ಧನಾಥೇಶ್ವರ ಸ್ಪೋರ್ಟ್ಸ್ ಕ್ಲಬ್ (ರಿ) ಮುಟ್ಲುಪಾಡಿ ಆಶ್ರಯದಲ್ಲಿ ಕಬಡ್ಡಿ ಆಟಗಾರ ದಿ. ಪ್ರೀತಂ ಶೆಟ್ಟಿ ಸ್ಮರಣಾರ್ಥ ಕಾರ್ಕಳ ವಿಧಾನ ಸಭಾ ವ್ಯಾಪ್ತಿ ಹಾಗೂ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟವು ಮುನಿಯಾಲಿನ ವೀರ ಸಾವರ್ಕರ್ ಮೈದಾನದಲ್ಲಿ ಮೇ.3 ರಂದು ಸಡೆಯಲಿರುವುದು ಎಂದು ಮುಂಬೈ ಉದ್ಯಮಿ, ಸಮಾಜ ಸೇವಕ ಗಿರೀಶ್ ಶೆಟ್ಟಿ ಕುಡುಪುಲಾಜೆ ತಿಳಿಸಿದರು.

ಅವರು ಕಾರ್ಕಳ ಪ್ರಕಾಶ್ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮತನಾಡಿ, ರಾಷ್ಟ್ರಮಟ್ಟದ ಪ್ರೋ ಕಬಡ್ಡಿ ಆಟಗಾರನ್ನೊಳಗೊಂಡ 8 ವಿವಿಧ ಮಾಲಕರನ್ನೊಳಗೊಂಡ 8 ತಂಡಗಳು ಭಾಗವಹಿಸಲಿದೆ. ಪ್ರೊ ಕಬಡ್ಡಿ ಮಾದರಿಯಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. 10 ಸಾವಿರಕ್ಕೂ ಅಧಿಕ ಜನರಿಗೆ ಪಂದ್ಯ ವೀಕ್ಷಿಸಲು ಗ್ಯಾಲರಿ ವ್ಯವಸ್ಥೆ ಮಾಡಲಾಗಿದೆ. ಪಂದ್ಯಾಟದ ವಿಶೇಷ ಆಕರ್ಷಣೆಯಾಗಿ ಮಾಜಿ ಕ್ರಿಕೆಟಿಗರು, ಮಾಜಿ ಪ್ರೊ ಕಬಡ್ಡಿ ಆಟಗಾರರು, ಬಾಲಿವುಡ್ ಹಾಗೂ ಸ್ಯಾಂಡಲ್ ವುಡ್ ನಟ, ನಟಿಯರು ಭಾಗವಹಿಸಲಿದ್ದಾರೆ ಎಂದರು.

ಸುಹಾಸ್ ಶೆಟ್ಟಿ ಮುಟ್ಲುಪಾಡಿ, ಗೋಪಿನಾಥ್ ಭಟ್ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article