ಶ್ರೀ ನಾಗಬೊಬ್ಬರ್ಯ, ಹ್ಯಾಗುಳಿ ಹಾಗೂ ಪರಿವಾರ ದೇವಸ್ಥಾನದ 10ನೇ ವರ್ಷದ ವರ್ಧಂತ್ಯೋತ್ಸವದ ಪ್ರಯುಕ್ತ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ನಾಗಬೊಬ್ಬರ್ಯ, ಹ್ಯಾಗುಳಿ ಹಾಗೂ ಪರಿವಾರ ದೇವಸ್ಥಾನದ 10ನೇ ವರ್ಷದ ವರ್ಧಂತ್ಯೋತ್ಸವದ ಪ್ರಯುಕ್ತ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


ಕುಂದಾಪುರ: ಇಲ್ಲಿನ ಚಿಕ್ಕನ್ ಸಾಲ್ ರಸ್ತೆಯ ರಾಯಲ್ ಸಭಾ ಭವನದ ಸಮೀಪದಲ್ಲಿರುವ ಶ್ರೀ ನಾಗಬೊಬ್ಬರ್ಯ, ಹ್ಯಾಗುಳಿ ಹಾಗೂ ಪರಿವಾರ ದೇವಸ್ಥಾನದ 10ನೇ ವರ್ಷದ ವರ್ಧಂತ್ಯೋತ್ಸವವು ಎ.5 ರಂದು ನಡೆಯಲಿರುವ ಪ್ರಯುಕ್ತ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾ.16 ರಂದು ನಡೆಯಿತು.


ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ನಾಗೇಶ್ ಅವರು ನೆರವೇರಿಸಿದರು.

ಅಧ್ಯಕ್ಷತೆಯನ್ನು ಶ್ರೀ ನಾಗ ಬೊಬ್ಯರ್ಯ ದೇವಸ್ಥಾನದ ಅಧ್ಯಕ್ಷ ರಾಧಾಕೃಷ್ಣ ಯು. ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ರೆಕಾರ್ಡ್ ರಾಣುಮಕ್ಕಿ ನಾಗಬನದ ಅಧ್ಯಕ್ಷ ಹಾಗೂ ಕುಂದೇಶ್ವರ ದೇವಸ್ಥಾನದ ಮಾಜಿ ಮೊಕ್ತೇಸರ ಕೆ.ಆರ್. ಉಮೇಶ್, ರಾಯಲ್ ಕ್ಲಬ್ ಅಧ್ಯಕ್ಷ ಕೆ. ನಿತ್ಯಾನಂದ, ಮೈಲಾರೇಶ್ವರ ಯುವಕ ಮಂಡಲದ ಅಧ್ಯಕ್ಷ ಕೆ.ಸಿ. ಶರತ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಸತೀಶ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ವಿ. ಮೊಗವೀರ, ಕೋಶಾಧಿಕಾರಿ ರಮೇಶ್ ಪೂಜಾರಿ ಮೇಲ್‌ಹಿತ್ಲು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಸಹಕಾರಿ ಸಂಘದ ಸಂಯೋಜಕಿ ಶಾಂತ ಹಾಗೂ ಶ್ರೀ ರಾಮ ಕ್ರೆಡಿಟ್ ಸೊಸೈಟಿಯ ನಿರ್ದೇಶಕಿ ಶಾರದ ವಿಜಯ ಕುಮಾರ್ ಹಾಗೂ ಆಡಳಿತ ಮಂಡಳಿಯ ಸರ್ವಸದಸ್ಯರು ಹಾಗೂ ದಶಮಾನೋತ್ಸವದ ಮಹಿಳಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article