ರಥಬೀದಿ ಕಾಲೇಜಿನಲ್ಲಿ 'ಸೈಬರ್ ಅರಿವು' ಕಾರ್ಯಗಾರ

ರಥಬೀದಿ ಕಾಲೇಜಿನಲ್ಲಿ 'ಸೈಬರ್ ಅರಿವು' ಕಾರ್ಯಗಾರ


ಮಂಗಳೂರು: ಮಂಗಳೂರಿನ ರಥಬೀದಿಯ ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಸಂಘದ ದಶಮಾನೋತ್ಸವದ ಅಂಗವಾಗಿ ಮಾ.13 ರಂದು ಕಾಲೇಜು ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ಉದ್ಯೋಗ ಕೋಶದ ಸಹಭಾಗಿತ್ವದಲ್ಲಿ ಪದವಿ ವಿದ್ಯಾರ್ಥಿಗಳಿಗೆ 'ಸೈಬರ್ ಅರಿವಿನ' ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.


ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಮಾರುತಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ನಮ್ಮ ನಿತ್ಯ ಜೀವನದಲ್ಲಿ ಆಗುತ್ತಿರುವ ಸೈಬರ್ ಸಂಬಂಧಿ ಸಮಸ್ಯೆಗಳು, ಸೈಬರ್ ಪ್ರಕರಣಗಳು ಮತ್ತು ಅದರ ಪರಿಣಾಮದಿಂದ ಆಗುತ್ತಿರುವ ಅನಾಹುತಗಳು, ಕಾನೂನಿನಡಿಯಲ್ಲಿ ಇರುವ  ರಕ್ಷಣೆಗಳ ಬಗ್ಗೆ ವಿಡಿಯೋ ಪ್ರಾತ್ಯಕ್ಷಿಕೆಗಳ ಮೂಲಕ ಮಾಹಿತಿಯನ್ನು ಹಂಚಿಕೊಂಡರು. 


ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜಯಕರ ಭಂಡಾರಿ ಎಂ., ಐಕ್ಯೂಎಸಿ ಸಂಯೋಜಕ ದೇವಿಪ್ರಸಾದ್, ಗಣಕ ಶಾಸ್ತ್ರ ವಿಭಾಗದ ಮುಖ್ಯಸ್ಥ ರಘುಪತಿ, ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯೋಜಕ ನಾಗರಾಜ್ ಎಂ., ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಧೀರಜ್ ಕುಮಾರ್, ಕಾರ್ಯದರ್ಶಿ ತುಷಾರ್ ಕೆ, ಹಿರಿಯ ವಿದ್ಯಾರ್ಥಿಗಳ ಸಂಘದ ಸದಸ್ಯರು ಅಮೃತ, ಹಾಗೂ ಸುಮಾರು 160ಕ್ಕಿಂತಲೂ ಹೆಚ್ಚು ವಿದ್ಯಾರ್ಥಿಗಳು, ಉಪನ್ಯಾಸಕರು ಭಾಗವಹಿಸಿದರು.





Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article