ಪ್ರಾಮಾಣಿಕತೆ ಮೆರೆದ ಪತ್ರಿಕಾ ವಿತರಕ

ಪ್ರಾಮಾಣಿಕತೆ ಮೆರೆದ ಪತ್ರಿಕಾ ವಿತರಕ


ಮಂಗಳೂರು: ವೃತ್ತಪತ್ರಿಕೆ ವಿತರಕರೊಬ್ಬರು ದುಬಾರಿ ಮೊಬೈಲ್ ಫೋನ್ ಅನ್ನು ಅದರ ಮಾಲಕರಿಗೆ ಹಿಂದಿರುಗಿಸಿದ್ದಾರೆ. ಅವರ ಈ ಪ್ರಾಮಾಣಿಕತೆಯ ಕಾರ್ಯವು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ಸಂತ ಅಲೋಶಿಯಸ್ ಡೀಮ್ಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಜೋಯಲ್ ಅವರು, ಸುಮಾರು 1.25 ಲಕ್ಷ ರೂ. ಮೌಲ್ಯದ ತನ್ನ ಐಫೋನ್ ಕಳೆದುಕೊಂಡಿದ್ದರು. ಅವರ ಈ ಫೋನ್ ಮಂಗಳೂರಿನ ರೇಣುಕಾರಾಜ್ ನ್ಯೂಸ್ ಏಜೆನ್ಸಿಯಲ್ಲಿ ಕೆಲಸ ಮಾಡುವ ವೃತ್ತಪತ್ರಿಕೆ ವಿತರಕ ರಮೇಶ್ ಅವರಿಗೆ ಸಿಕ್ಕಿತ್ತು.

ಆದರೆ ರಮೇಶ್ ಅವರು ಈ ಫೋನ್ ಇಟ್ಟುಕೊಳ್ಳದೇ ಸಾಮಾಜಿಕ ಮಾಧ್ಯಮದಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಇದರಿಂದಾಗಿ ಫೋನ್‌ನ ನಿಜವಾದ ಮಾಲಕರನ್ನು ಪತ್ತೆಹಚ್ಚಲು ಸಹಾಯವಾಯಿತು. ಈ ಫೋನ್ ಅನ್ನು ಜೋಯಲ್ ಅವರದ್ದೇ ಎಂದು ಖಚಿತಪಡಿಸಿಕೊಂಡ ರಮೇಶ್ ಅವರು ತಕ್ಷಣವೇ ಅವರಿಗೆ ಹಸ್ತಾಂತರಿಸಿದ್ದಾರೆ. ರಮೇಶ್ ಅವರು ಪ್ರಾಮಾಣಿಕತೆಗಾಗಿ ಸಾರ್ವಜನಿಕರಿಂದ ಮೆಚ್ಚುಗೆ ಗಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article