
ಅಕ್ರಮ ಮರಳುಗಾರಿಕೆ ತಡೆಗೆ ಚಾಲಿತ ದಳ
Tuesday, March 18, 2025
ಮಂಗಳೂರು: ಮಂಗಳೂರು ಉಪವಿಭಾಗದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಯನ್ನು ಪರಿಣಾಮಕಾರಿಯಾಗಿ ತಡೆಯಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಚಾಲಿತ ದಳವನ್ನು ರಚಿಸಿ ಆದೇಶ ನೀಡಿದ್ದಾರೆ.
ಚಾಲಿತ ದಳವು ಅನಧಿಕೃತ ಮರಳುಗಾರಿಕೆ ಮತ್ತು ಸಾಗಣಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.
ಸರಕಾರದ ಆದೇಶವನ್ನು ಪಾಲನೆ ಮಾಡದೆ ರಾತ್ರಿ ವೇಳೆ ಅಕ್ರಮವಾಗಿ ಮರಳು ಗಣಿಗಾರಿಕೆ, ದಾಸ್ತಾನು ಮತ್ತು ಸಾಗಾಟ ನಡೆಯುತ್ತಿದೆ ಎಂಬ ಬಗ್ಗೆ ಸಾರ್ವಜನಿಕರಿಂದ ಹಲವು ದೂರುಗಳು ಜಿಲ್ಲಾಧಿಕಾರಿ ಕಚೇರಿಗೆ ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರು ಅಕ್ರಮ ಗಣಿಗಾರಿಕೆಯನ್ನು ತಡೆಯಲು ತಂಡ ವನ್ನು ರಚಿಸಿದ್ದಾರೆ.