ಹೊರಗುತ್ತಿಗೆ ನೌಕರರ ಮಾಹಿತಿ ನೀಡಲು ಜಿಲ್ಲಾಧಿಕಾರಿ ಸೂಚನೆ

ಹೊರಗುತ್ತಿಗೆ ನೌಕರರ ಮಾಹಿತಿ ನೀಡಲು ಜಿಲ್ಲಾಧಿಕಾರಿ ಸೂಚನೆ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವಿವಿಧೋದ್ದೇಶದ ಉದ್ದೇಶಿತ  ಕಾರ್ಮಿಕರ ಸಹಕಾರ ಸಂಘದ ಪೂರ್ವಭಾವಿ ಸಭೆ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.  

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲಾ ವಿವಿಧೋದ್ದೇದ ಉದ್ದೇಶಿತ ಕಾರ್ಮಿಕರ  ಸಂಘ ಸ್ಥಾಪಿಸುವುದರಿಂದ  ಹೊರಗುತ್ತಿಗೆ ನೌಕರರಿಗೆ ಅನುಕೂಲವಾಗುತ್ತದೆ. ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ  ಮತ್ತು ತಮ್ಮ ತಾಲೂಕು ಕಚೇರಿಗಳಲ್ಲಿನ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರ ಸಿಬ್ಬಂದಿಗಳ ವಿವರಗಳನ್ನು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ನೀಡಬೇಕು ಎಂದು ಸೂಚಿಸಿದರು. 

ಸಂಘದ ರಚನೆಯ ಕುರಿತು ನೋಂದಣಿಗೆ ಸಂಬಂಧಿಸಿದ ದಾಖಲೆಗಳು ಹಾಗೂ ಇತ್ಯಾದಿ ವಿಷಯಗಳ ಸಂಕ್ಷಿಪ್ತ ಮಾಹಿತಿಯನ್ನು ಸಹಕಾರ ಸಂಘಗಳ ಜಂಟಿ ನಿಬಂಧಕರಿಗೆ ಸಲ್ಲಿಸಲು ಹಾಗೂ ಕ್ರೋಢೀಕೃತ ದಾಖಲೆಗಳನ್ನು ಸಿದ್ಧಪಡಿಸಲು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು. 

ಹೊರಗುತ್ತಿಗೆ ನೌಕರರಿಗೆ ಅನುಕೂಲವಾಗುವ ಸಂಘ ರಚಿಸುವ  ಕುರಿತು  ಪೂರ್ವಭಾವಿ ಸಭೆಯನ್ನು ನಡೆಸಬೇಕು ಹಾಗೂ ಅವರಿಗೆ ಮಾಹಿತಿ ನೀಡಬೇಕು ಎಂದು ಅವರು ಸೂಚಿಸಿದರು.

ಸಂಘ ಸ್ಥಾಪನೆಯ ಅವಶ್ಯಕತೆ ಬಗ್ಗೆ ಹಾಗೂ ಬೀದರ್ ಜಿಲ್ಲೆಯ ಮಾದರಿಯಲ್ಲಿ ಪ್ರಾಯೋಗಿಕವಾಗಿ ರಾಜ್ಯದ ಮೂರು ಜಿಲ್ಲೆಗಳಲ್ಲಿ ಆರಂಭಿಸುವುದರ ಜೊತೆಗೆ ನಮ್ಮ ಜಿಲ್ಲೆಯಲ್ಲಿಯೂ ಸಹ ಅದೇ ಮಾದರಿಯಲ್ಲಿ ಸಂಘ ರಚನೆ ಮಾಡಬೇಕು ಎಂದು ಕಾರ್ಮಿಕ ಇಲಾಖೆ   ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್ ಕೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ, ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಹಾಗೂ  ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು  ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article