ಹಿಂದೂ ಮುಖಂಡನ ಹಟ್ಟಿಯಿಂದ ದನ ಕಳ್ಳತನ: ಆರೋಪಿಗಳನ್ನು ಬಂಧಿಸದಿದ್ದರೆ ಹಿಂಜಾವೇಯಿಂದ ಪ್ರತಿಭಟನೆ

ಹಿಂದೂ ಮುಖಂಡನ ಹಟ್ಟಿಯಿಂದ ದನ ಕಳ್ಳತನ: ಆರೋಪಿಗಳನ್ನು ಬಂಧಿಸದಿದ್ದರೆ ಹಿಂಜಾವೇಯಿಂದ ಪ್ರತಿಭಟನೆ

ಮೂಡುಬಿದಿರೆ: ಕಳೆದ ಮೂರು ದಿನಗಳ ಹಿಂದೆ  ಹಿಂದು ಸಂಘಟನೆಯ ಮುಖಂಡನ ಮನೆಯ ಹಟ್ಟಿಯಿಂದ ದನ ಕಳ್ಳತನ ನಡೆಸಿದ ಆರೋಪಿಗಳನ್ನು ವಾರದೊಳಗೆ ಬಂಧಿಸದಿದ್ದರೆ ಹಿಂಜಾವೇ ಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಮೂಡುಬಿದಿರೆ ತಾಲೂಕು ಬೆಳುವಾಯಿಯ ಬಜರಂಗದಳದ ಮುಖಂಡರಾದ ಸೋಮನಾಥ್ ಕೋಟ್ಯಾನ್ ರವರ ಮನೆಯ ಹಟ್ಟಿಯಿಂದಲೇ ದನ ಕಳ್ಳತನ ಮಾಡಿದ ಪ್ರಕರಣ ನಡೆದಿದ್ದು ಇದೊಂದು ಗಂಭೀರ ಪ್ರಕರಣವಾಗಿದೆ. ಇದನ್ನು ಹಿಂದೂ ಜಾಗರಣ ವೇದಿಕೆ ಮೂಡುಬಿದಿರೆ ತಾಲೂಕು ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ದರೆಗುಡ್ಡೆ ಎಚ್ಚರಿಸಿದ್ದಾರೆ. 

ಕಳೆದ ಕೆಲವು ತಿಂಗಳುಗಳಿಂದ ದನ ಕಳ್ಳತನದ ಪ್ರಕರಣಗಳು ಹೆಚ್ಚಾಗಿದ್ದು ಈ ಬಗ್ಗೆ ಪೋಲಿಸ್ ಇಲಾಖೆ ಕೂಡಲೇ ಕ್ರಮ ಕೈಗೊಂಡು ದನ ಕಳ್ಳರನ್ನು ಕೂಡಲೇ ಬಂಧಿಸಬೇಕು ಹಾಗೂ ಅವರ ಮೇಲೆ ದರೋಡೆ ಕೇಸ್ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ. ಇಲ್ಲವಾದಲ್ಲಿ ಸಮಾಜವೇ ಇದಕ್ಕೆ ಸೂಕ್ತ ರೀತಿಯಲ್ಲಿ ಪ್ರತಿಕ್ರಿಯೆ ನೀಡಲಿದೆ, ಇದರಿಂದಾಗಿ ಮುಂದಿನ ದಿನಗಳಲ್ಲಿ ಸಮಾಜದಲ್ಲಿ ಕೋಮು ಗಲಭೆಗಳು ನಡೆದರೆ ನೇರವಾಗಿ ಸಂಬಂಧ ಪಟ್ಟ ಪೋಲಿಸ್ ಇಲಾಖೆ ಅಧಿಕಾರಿಗಳು ಕಾರಣ ವಾಗುತ್ತಾರೆ ಎಂದು ಎಚ್ಚರಿಸಿದ್ದಾರೆ. 

ಈಗಾಗಲೇ ಹಿಂದೂ ಜಾಗರಣ ವೇದಿಕೆ ಹಲವಾರು ಬಾರಿ ಪೊಲೀಸ್ ಇಲಾಖೆಗೆ ಮನವಿಯನ್ನು ನೀಡಿರುವುದನ್ನು ನೆನಪಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article