
ಮಾಂಟ್ರಾಡಿಯಲ್ಲಿ ವಾತ್ಸಲ್ಯ ಮನೆ ಹಸ್ತಾಂತರ
Friday, March 21, 2025
ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ) ಮೂಡುಬಿದಿರೆ ತಾಲೂಕಿನಲ್ಲಿ ಜ್ಞಾನ ವಿಕಾಸದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಾಂಟ್ರಾಡಿ ಗ್ರಾಮದ ಬೇಬಿ ಪೂಜಾರ್ತಿ ಅವರಿಗೆ ವಾತ್ಸಲ್ಯ ಮನೆಯನ್ನು ಗುರುವಾರ ಹಸ್ತಾಂತರಿಸಲಾಯಿತು.
ಯೋಜನೆಯ ಟ್ರಸ್ಟಿಗಳಾದ ಸಂಪತ್ ಸಾಮ್ರಾಜ್ಯ ಅವರು ದೀಪ ಬೆಳಗಿಸಿ ದೇವರ ಪ್ರಸಾದ ನೀಡಿ ಕಿಟ್ ವಿತರಿಸಿದರು.
ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಅವರು ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ನೀಡುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು.
ನೆಲ್ಲಿಕಾರು ಗ್ರಾ.ಪಂಚಾಯತ್ ಅಧ್ಯಕ್ಷ ಉದಯ ಪೂಜಾರಿ, ವಲಯದ ಅಧ್ಯಕ್ಷ ಕಿರಣ್, ಯುವ ಬಿರುವೆರ್ ಸಂಘಟನೆಯ ಗೌರವ ಅಧ್ಯಕ್ಷ ಅಶ್ವಿನ್ ಪೂಜಾರಿ, ಒಕ್ಕೂಟದ ಅಧ್ಯಕ್ಷ ವಿದೇಶ್, ಯೋಜನಾ ಧಿಕಾರಿ ಸುನೀತಾ ನಾಯ್ಕ್, ಊರಿನ ಗಣ್ಯರಾದ ಅಶೋಕ್ ಜೈನ್, ಜ್ಞಾನ ವಿಕಾಸ ಸಮನ್ವಯಧಿಕಾರಿ ವಿದ್ಯಾ,ವಲಯದ ಮೇಲ್ವಿಚಾರಕಿ ಶಿವ ಲಕ್ಷ್ಮಿ, ಒಕ್ಕೂಟದ ಮಾಜಿ ಅಧ್ಯಕ್ಷ ವಿಠ್ಠಲ್ ಆಚಾರಿ, ಸೇವಾಪ್ರತಿನಿಧಿಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.