ರಿಕ್ಷಾ ಚಾಲಕ ಆತ್ಮಹತ್ಯೆ

ರಿಕ್ಷಾ ಚಾಲಕ ಆತ್ಮಹತ್ಯೆ


ಪುತ್ತೂರು: ಆಟೋ ರಿಕ್ಷಾ ಚಾಲಕರೊಬ್ಬರು ಮರವೊಂದಕ್ಕೆ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಪೆರಿಯತ್ತೋಡಿ ಎಂಬಲ್ಲಿಂದ ವರದಿಯಾಗಿದೆ.

ಪೆರಿಯತ್ತೋಡಿ ನಿವಾಸಿ ದಿ. ಹುಕ್ರಪ್ಪ ಗೌಡ ಎಂಬರ ಪುತ್ರ ಕೃಷ್ಣ (40) ಆತ್ಮಹತ್ಯೆ ಮಾಡಿಕೊಂಡವರು.

ಅಟೋ ರಿಕ್ಷಾದಲ್ಲಿ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಈತ ಎಂದಿನಂತೆ ಮಕ್ಕಳನ್ನು ಶಾಲೆಗೆ ಬಿಟ್ಟು ಬಂದಿದ್ದರು. ಬಳಿಕ ಮನೆಯ ಸಮೀಪದಲ್ಲಿನ ಮರವೊಂದರ ಟೊಂಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಗಾರರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕೆ ವ್ಯಕ್ತವಾಗಿದೆ. 

ಮೃತರು ತಾಯಿ, ಮೂವರು ಸಹೋದರರು ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.



Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article