ಮೀನು ಕದ್ದ ಆರೋಪ: ಮರಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ

ಮೀನು ಕದ್ದ ಆರೋಪ: ಮರಕ್ಕೆ ಕಟ್ಟಿಹಾಕಿ ಮಹಿಳೆಗೆ ಹಲ್ಲೆ

ಉಡುಪಿ: ಮೀನು ಕದ್ದ ಆರೋಪದಡಿ ವಿಜಯಪುರ ಜಿಲ್ಲೆಯ ಲಮಾಣಿ ಜನಾಂಗಕ್ಕೆ ಸೇರಿದ ಪರಿಶಿಷ್ಟ ಜಾತಿಯ ಮಹಿಳೆಯೋರ್ವರನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ ಘಟನೆ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ನಡೆದಿದ್ದು, ಆ ವೀಡಿಯೊ ವೈರಲ್ ಆಗಿದೆ.

ಬುದ್ದಿವಂತರ ಜಿಲ್ಲೆ ಎಂದೆನಿಸಿದ ಉಡುಪಿಯಲ್ಲಿ ನಡೆದ ಈ ಅಮಾನವೀಯ ಘಟನೆಯನ್ನು ತಡೆಯುವ ಬದಲು, ನೆರೆದ ಅಷ್ಟೂ ಮಂದಿ ವೀಡಿಯೊ ಚಿತ್ರೀಕರಣ ಹಾಗೂ ವಿಕೃತ ಸಂತಸ ವ್ಯಕ್ತಪಡಿಸುತ್ತಿರುವುದು ಜನತೆಯ ಮನಃಸ್ಥಿತಿಗೆ ಕನ್ನಡಿ ಹಿಡಿದಂತಿದೆ. ಘಟನೆಗೆ ಸರ್ವತ್ರ ಖಂಡನೆ ವ್ಯಕ್ತವಾಗಿದೆ.

ಮಾ.18ರಂದು ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ತನಿಖೆ ನಡೆಸಿದ ಮಲ್ಪೆ ಪೊಲೀಸರು, ಹಲ್ಲೆಗೊಳಗಾದ ಮಹಿಳೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ ಮಹಿಳೆ ಬಂದರಿನಲ್ಲಿ ಮೀನು ಕದ್ದಿದ್ದಾರೆ ಎಂದು ಆರೋಪಿಸಿ ಸ್ಥಳೀಯರಾದ ಲಕ್ಷ್ಮೀಬಾಯಿ ಹಲ್ಲೆ ಮಾಡಿದ್ದು, ನಂತರ ಸ್ಥಳೀಯರು ಸೇರಿ ಆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಲಕ್ಷ್ಮೀಬಾಯಿ, ಸುಂದರ, ಶಿಲ್ಪಾ ಹಾಗೂ ಇನ್ನೋರ್ವನನ್ನು ಗುರುತಿಸಲಾಗಿದೆ. ಇನ್ನುಳಿದವರ ಪಾತ್ರದ ಬಗ್ಗೆ ವಿಡಿಯೋ ಮೂಲಕ ಪರಿಶೀಲಿಸಿ, ಕಾನೂನು ಕ್ರಮ ಜರುಗಿಸಲಾಗುವುದು ಎಂದವರು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article