ಯುವ ಭಾಗವತ ಸತೀಶ್ ಆಚಾರ್ಯ ರಸ್ಥೆ ಅಪಘಾತದಲ್ಲಿ ಮೃತ್ಯು

ಯುವ ಭಾಗವತ ಸತೀಶ್ ಆಚಾರ್ಯ ರಸ್ಥೆ ಅಪಘಾತದಲ್ಲಿ ಮೃತ್ಯು


ಉಜಿರೆ: ವೇಣೂರು ಬಳಿಯ ಅಂಡಿಂಜೆ ಗ್ರಾಮದ ಪಿಯೂಲಿರು ಮನೆ ನಿವಾಸಿ ದಿ. ಅಣ್ಣಿ ಆಚಾರ್ಯ ಮತ್ತು ವಿನೋದ ಆಚಾರ್ಯ ದಂಪತಿ ಪುತ್ರ, ಮಂಗಳಾದೇವಿ ಯಕ್ಷಗಾನ ಮೇಳದ ಯುವ ಭಾಗವತ ಸತೀಶ್ ಆಚಾರ್ಯ ಅಂಡಿಂಜೆ (40) ಅವರು ಮಾ.31 ರಂದು ಮುಂಜಾನೆ 4 ಗಂಟೆಗೆ ಅಂಡಿಂಜೆಯ ಕಿಲಾರ ಮಾರಿಕಾಂಬಾ ದೇವಸ್ಥಾನದ ತೆರುವಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.

ಅವರು ಕಳೆದ ರಾತ್ರಿ ಸುಳ್ಯದಲ್ಲಿ ನಡೆದ ಮೇಳದ ಯಕ್ಷಗಾನ ಕಾರ್ಯಕ್ರಮವನ್ನು ಮುಗಿಸಿ ಬೈಕ್‌ನಲ್ಲಿ ಅಂಡಿಂಜೆ ಮನೆಗೆ ಬರುತ್ತಿರುವ ವೇಳೆ ಮುಂಜಾನೆ 4 ಗಂಟೆಗೆ  ತಿರುವಿನಲ್ಲಿ ಎದುರಿನಿಂದ ಬರುತ್ತಿದ್ದ ಬೈಕ್ ಹಾಗೂ ಇವರ ಬೈಕ್ ಪರಸ್ಪರ ಢಿಕ್ಕಿ ಹೊಡೆದ ದುರ್ಘಟನೆಯಲ್ಲಿ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು. ಎದುರಿನಿಂದ ಬರುತ್ತಿದ್ದ ಬೈಕ್ ಸವಾರನಿಗೂ ಗಾಯವಾಗಿದೆ. 

ಮೃತರು ತಾಯಿ, ಸಹೋದರಿ, ಸಹೋದರ ಹಾಗೂ ಬಂಧು ವರ್ಗವನ್ನು ಅಗಲಿದ್ದಾರೆ. ವೇಣೂರು ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article