ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಧಿವಾತ, ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಂಧಿವಾತ, ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ

ಉಜಿರೆ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೆಗ್ಗಡೆಯವರ ಆದೇಶದಂತೆ ಹಾಗೂ ಹೇಮಾವತಿ ವಿ. ಹೆಗ್ಗಡೆ ಅವರ ಮತ್ತು ಡಿ. ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಸಂಧಿವಾತ ಮತ್ತು ಅಟೋ ಇಮ್ಯೂನ್ ತೊಂದರೆಗಳಿಗೆ ಉಚಿತ ಚಿಕಿತ್ಸಾ ಶಿಬಿರ ಎ.2 ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 2.30ರವರೆಗೆ ನೆಡೆಯಲಿದೆ.

ಈ ಶಿಬಿರದಲ್ಲಿ ಮಂಗಳೂರು ಅತ್ತಾವರ ಕೆಎಂ.ಸಿ ಆಸ್ಪತ್ರೆಯ ಖ್ಯಾತ ಸಂಧಿವಾತ ತಜ್ಞರಾದ ಡಾ. ಶಿವರಾಜ್ ಪಡಿಯಾರ್ ಮತ್ತು ಪ್ರತ್ಯೂಷ ಮಣಿಕುಪ್ಪಂ ಭಾಗವಹಿಸಲಿದ್ದಾರೆ. ಸಂಧಿವಾತ, ಅಸ್ಥಿ ಸಂಧಿವಾತ, ಮಕ್ಕಳ ಸಂಧಿವಾತ, ರುಮಟಾಯ್ಡ್, ಆರ್ಥೈಟಿಸ್, ಸ್ಟಾಂಡಿಲೋ ಆರ್ಥೈಟಿಸ್, ಸಿಸ್ಟಮಿಕ್ ಲೂಪಸ್ ಎರಿಥೆಮಾಟೋಸಸ್, ಸೋರಿಯಾಸಿಸ್, ವಾಸ್ಕುಲೈಟಿಸ್ ಮುಂತಾದ ತೊಂದರೆಗಳಿಂದ ಬಳಲುತ್ತಿರುವವರು ಈ ಶಿಬಿರದಲ್ಲಿ ಭಾಗವಹಿಸಬಹುದು. 

ಈ ಶಿಬಿರದಲ್ಲಿ ಉಚಿತ ಸಮಾಲೋಚನೆಯ ಜತೆಗೆ ರಕ್ತ ಪರೀಕ್ಷೆ ಹಾಗೂ ಔಷಧಗಳಿಗೆ ಶೇ.10 ರಿಯಾಯಿತಿಯನ್ನು ಪಡೆಯಬಹುದಾಗಿದೆ. ಹೆಸರು ನೊಂದಾಯಿಸಿಕೊಳ್ಳಲು 7760397878, 9972000438 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article