ಫೋಕ್ಸೋ ದಾಖಲಾದರೂ ಆರೋಪಿ ಬಂಧನ ಇಲ್ಲ

ಫೋಕ್ಸೋ ದಾಖಲಾದರೂ ಆರೋಪಿ ಬಂಧನ ಇಲ್ಲ

ಬಂಟ್ವಾಳ: ಬಂಟ್ವಾಳ ತಾಲೂಕಿನ ವಿಟ್ಲ ಮಾಣಿಲ ಗ್ರಾಮದ ಮುರುವದಲ್ಲಿ ಅಪ್ರಾಪ್ತ ವಯಸ್ಸಿನ ದಲಿತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ನಿವಾಸಿ ಮಹೇಶ್ ಭಟ್ ಲೈಂಗಿಕ ಕಿರುಕುಳ ನೀಡಿ ಜಾತಿ ನಿಂದನೆ ಎಸಗಿರುವ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಹಾಗೂ ದಲಿತ ದೌರ್ಜನ್ಯ ಕಾಯಿದೆಯ ಅನ್ವಯ ಪ್ರಕರಣ ದಾಖಲಾಗಿದ್ದರೂ, ಆರೋಪಿಯನ್ನು ಇದುವರೆಗೆ ಬಂಽಸಿಲ್ಲ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ವಾಭಿಮಾನಿ ಪ್ರೊ. ಕೃಷ್ಣಪ್ಪ ಬಣ ಆರೋಪಿಸಿದೆ.

ಪ್ರಕರಣದಲ್ಲಿ ಪೊಲೀಸ್ ಇಲಾಖೆ  ಕ್ರಮ ಜರುಗಿಸದೇ ಇರುವುದು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಡುತ್ತಿದೆ. ತಕ್ಷಣ ಆರೋಪಿಯನ್ನು ಬಂಽಸಿ ಕಾನೂನು ಕ್ರಮ ಜರುಗಿಸಬೇಕು ಎಂದು ದಸಂಸ ಜಿಲ್ಲಾ ಸಂಚಾಲಕ ಸದಾಶಿವ ಪಡುಬಿದ್ರಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. 

ಆರೋಪಿ ರಾಜಕೀಯ ಹಾಗೂ ಸಾಮಾಜಿಕವಾಗಿ ಪ್ರಬಲ ವ್ಯಕ್ತಿಯಾಗಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದರೂ ಪೊಲೀಸರು ಆರೋಪಿಯನ್ನು ಬಂಽಧಿಸಿಲ್ಲ. ಒಂದೇ ಒಂದು ಬಾರಿ ಆರೋಪಿಯ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಈ ಕುರಿತು ದ.ಕ. ಎಸ್ಪಿ ಅವರ ಗಮನಕ್ಕೂ ತರಲಾಗಿದೆ. ಆರೋಪಿ ಬಾಲಕಿಗೆ ಬೆದರಿಕೆ ಹಾಕಿದ್ದು, ಮಾನಸಿಕವಾಗಿ ವಿದ್ಯಾರ್ಥಿನಿ ಕುಗ್ಗಿ ಹೋಗಿದ್ದಾಳೆ. ಪ್ರಕರಣ ದಾಖಲಾಗಿ ಒಂದು ವಾರವಾದರೂ ಗಂಭೀರ ಪ್ರಕರಣ ಎಂದೇ ಪೊಲೀಸ್ ಇಲಾಖೆ ಪರಿಗಣಿಸಿಲ್ಲ. ಆರೋಪಿಯ ಪರವಾಗಿಯೇ ಪೊಲೀಸ್ ಇಲಾಖೆ ಸಹಕಾರ ನೀಡುತ್ತಿರುವುದು ಖಂಡನೀಯ. ಆರೋಪಿಯನ್ನು ತಕ್ಷಣ ಬಂಽಸದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಪ್ರಬಲ ಪ್ರತಿಭಟನೆ ನಡೆಸಲು ಸಮಿತಿ ನಿರ್ಧರಿಸಿದೆ ಎಂದರು.

ಸಮಿತಿಯ ಜಿಲ್ಲಾ ಮಹಿಳಾ ಸಂಚಾಲಕಿ ಸರೋಜಿನಿ ಬಂಟ್ವಾಳ, ಸಂಘಟನಾ ಸಂಚಾಲಕ ಕೃಷ್ಣಾನಂದ ಡಿ., ಖಜಾಂಚಿ ನಾಗೇಶ್ ಚಿಲಿಂಬಿ, ದಲಿತ ಕಲಾ ಮಂಡಳಿಯ ಕಮಲಾಕ್ಷ ಬಜಾಲ್, ಮಂಗಳೂರು ತಾಲೂಕು ಸಂಚಾಲಕ ರಾಘವೇಂದ್ರ ಎಸ್. ಪೇಜಾವರ, ಮಂಗಳೂರು ಸಂಘಟನಾ ಸಂಚಾಲಕ ರುಕ್ಕಯ್ಯ ಕರಂಬಾರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article